ಮನಮೋಹನ್ ಸಿಂಗ್ 
ದೇಶ

2ಜಿ ಪ್ರಕರಣದಲ್ಲಿ ರಾಜಾ ಮಾಜಿ ಪ್ರಧಾನಿ ಸಿಂಗ್ ಗೆ ತಪ್ಪು ಮಾಹಿತಿ ನೀಡಿರಲಿಲ್ಲ: ಕೋರ್ಟ್

2 ಜಿ ಹಗರಣ ಪ್ರಕರಣದ ಬಗ್ಗೆ ತೀರ್ಪು ಪ್ರಕಟಿಸಿರುವ ಸಿಬಿಐ ನ್ಯಾಯಾಲಯ, ಮಾಜಿ ಕೇಂದ್ರ ಸಚಿವ ಎ.ರಾಜಾ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ 2 ಜಿ ಸ್ಪೆಕ್ಟ್ರಂ ಹಂಚಿಕೆ ಬಗ್ಗೆ ತಪ್ಪು ಮಾಹಿತಿ ನೀಡಿರಲಿಲ್ಲ...

ನವದೆಹಲಿ: 2 ಜಿ ಹಗರಣ ಪ್ರಕರಣದ ಬಗ್ಗೆ ತೀರ್ಪು ಪ್ರಕಟಿಸಿರುವ ಸಿಬಿಐ ನ್ಯಾಯಾಲಯ, ಮಾಜಿ ಕೇಂದ್ರ ಸಚಿವ ಎ.ರಾಜಾ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ 2 ಜಿ ಸ್ಪೆಕ್ಟ್ರಂ ಹಂಚಿಕೆ ಬಗ್ಗೆ ತಪ್ಪು ಮಾಹಿತಿ ನೀಡಿರಲಿಲ್ಲ ಎಂದು ಕೋರ್ಟ್ ಹೇಳಿದೆ. 
ಸ್ಪೆಕ್ಟ್ರಂ ಹಂಚಿಕೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಪ್ರಧಾನಿ ಕಾರ್ಯಾಲಯದ ಸಿಬ್ಬಂದಿ ಸಂಪೂರ್ಣ ಮಾಹಿತಿ ನೀಡಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಇದಕ್ಕಾಗಿ ಎ. ರಾಜಾ ಅವರನ್ನು ದೂಷಿಸಲು ಸಾಧ್ಯವಿಲ್ಲ ಎಂದು ವಿಶೇಷ ನ್ಯಾಯಾಧೀಶ ಒ.ಪಿ ಸೈನಿ ಅಭಿಪ್ರಾಯಪಟ್ಟಿದ್ದಾರೆ. 
ತರಂಗಾಂತರ ಹಂಚಿಕೆಗೆ ಸಂಬಂಧಿಸಿದ ವಾಸ್ತವ ಮಾಹಿತಿಯನ್ನು ಅಂದಿನ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರಿಗೆ ತಪ್ಪಾಗಿ ಅರ್ಥೈಸಲಾಗಿದೆ ಎಂಬ ಪ್ರತಿವಾದಿಗಳ ವಾದವನ್ನು ಕೋರ್ಟ್ ತಳ್ಳಿಹಾಕಿದ್ದು, ಟೆಲಿಕಾಂ ಇಲಾಖೆ(ಡಿಒಟಿ) ನ ನಿರ್ಧಾರದ ಬಗ್ಗೆ ತಿಳಿಸಿರುವ ಪತ್ರ ಹಾಗೂ ಅದರಲ್ಲಿ ಹೇಳಲಾಗಿದ್ದ ತರಂಗಾಂತರ ಹಂಚಿಕೆಯಲ್ಲಿ ಹೊಸ ಪರವಾನಗಿಯ ನೀಡುವುದು ತುರ್ತು ಅಗತ್ಯ, ಈ ಬಗ್ಗೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂಬ ಅಂಶಗಳಿತ್ತು. ಆದರೆ ಈ ಬಗ್ಗೆ ಪ್ರಧಾನಿ ಕಾರ್ಯಾಲಯದ ಸಿಬ್ಬಂದಿಗಳು ಸರಿಯಾಗಿ ಪರಿಶೀಲನೆ ನಡೆಸಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ಕೋರ್ಟ್ ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT