ದೇಶ

2ಜಿ ಹಗರಣವನ್ನು ಕೆಲವರು ಕಲಾತ್ಮಕವಾಗಿ ಸೃಷ್ಟಿಸಿದ್ದರು: 2ಜಿ ತೀರ್ಪಿನ ನ್ಯಾಯಾಧೀಶ

ಯುಪಿಎ ಸರ್ಕಾರಕ್ಕೆ ಕಳಂಕ ತಂದಿದ್ದ 2ಜಿ ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐನ ವಿಶೇಷ ನ್ಯಾಯಾಧೀಶರು ತನಿಖೆ ನಡೆಸಿರುವ ಸಿಬಿಐ ವಿರುದ್ಧವೇ ತೀವ್ರ ಅಸಮಾಧಾನಗೊಂಡಿದ್ದು...

ಯುಪಿಎ ಸರ್ಕಾರಕ್ಕೆ ಕಳಂಕ ತಂದಿದ್ದ 2ಜಿ ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐನ ವಿಶೇಷ ನ್ಯಾಯಾಧೀಶರು ತನಿಖೆ ನಡೆಸಿರುವ ಸಿಬಿಐ ವಿರುದ್ಧವೇ ತೀವ್ರ ಅಸಮಾಧಾನಗೊಂಡಿದ್ದು, ಹಗರಣವನ್ನು ಕೆಲವರು ಕಲಾತ್ಮಕವಾಗಿ ಸೃಷ್ಟಿಸಿದ್ದರು ಎಂದು ಹೇಳಿದೆ. 
ಆರೋಪಿಗಳ ವಿರುದ್ಧ ದಾಖಲಿಸಲಾಗಿರುವ ಸಿಬಿಐನ ಆರೋಪ ಪಟ್ಟಿ ಸರಿ ಇಲ್ಲ ಎಂದಿರುವ ಸಿಬಿಐ ನ ವಿಶೇಷ ನ್ಯಾಯಮೂರ್ತಿ ಒಪಿ ಸೈನಿ, ಕೆಲವರು ಈ ಹಗರಣವನ್ನು ಕಲಾತ್ಮಕವಾಗಿ ಸೃಷ್ಟಿಸಿದ್ದಾರೆ ಎಂದಿದ್ದಾರೆ. ಹಗರಣ ನಡೆದಿರುವುದನ್ನು ಸಾಬೀತುಪಡಿಸಲು ಸಿಬಿಐ ವಿಫಲವಾಗಿದೆ. ಪ್ರವೇಶ ಶುಲ್ಕವನ್ನು ಪರಿಷ್ಕರಣೆ ಮಾಡಲು ಹಣಕಾಸು ಕಾರ್ಯದರ್ಶಿ ಪ್ರಬಲವಾಗಿ ಶಿಫಾರಸು ಮಾಡಿರುವುದು, ಎ.ರಾಜಾ ಅವರು ಸಲ್ಲಿಸಿರುವ ಲೆಟರ್ ಆಫ್ ಇಂಟೆಂಟ್ ಸೇರಿದಂತೆ ಚಾರ್ಜ್ ಶೀಟ್ ನಲ್ಲಿ ದಾಖಲಿಸಲಾಗಿರುವ ಅನೇಕ ಅಂಶಗಳು ತಪ್ಪಾಗಿ ದಾಖಲಿಸಲಾಗಿದೆ. 
ಇಂತಹ ಗಂಭೀರ ಪ್ರಕರಣಗಳಲ್ಲಿ ವಾದ ಮಂಡಿಸಬೇಕಾದರೆ ಉಭಯ ಪಕ್ಷದ ವಕೀಲರೂ ಸಹ  ಹೆಚ್ಚಿನ ಶ್ರಮ ವಹಿಸಬೇಕು ಎಂದು ಕೋರ್ಟ್ ಸಲಹೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT