ಮನೋಜ್ ಸಿನ್ಹಾ 
ದೇಶ

2ಜಿ ತೀರ್ಪು ಅನಿರೀಕ್ಷಿತ, ಸರ್ಕಾರದ ಹಂಚಿಕೆ 'ದೋಷಯುಕ್ತ': ಟೆಲಿಕಾಂ ಸಚಿವ

2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದ ಎಲ್ಲಾ ಆರೋಪಿಗಳನ್ನು ಸಿಬಿಐ ವಿಶೇಷ ಕೋರ್ಟ್ ಖುಲಾಸೆಗೊಳಿಸಿ ತೀರ್ಪು ನೀಡಿರುವುದು ಅನಿರೀಕ್ಷಿತ

ನವದೆಹಲಿ: 2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದ ಎಲ್ಲಾ ಆರೋಪಿಗಳನ್ನು ಸಿಬಿಐ ವಿಶೇಷ ಕೋರ್ಟ್ ಖುಲಾಸೆಗೊಳಿಸಿ ತೀರ್ಪು ನೀಡಿರುವುದು ಅನಿರೀಕ್ಷಿತ. ಆದರೆ ಯುಪಿಎ ಸರ್ಕಾರದ 2ಜಿ ಸ್ಪೆಕ್ಟ್ರಂ ಹಂಚಿಕೆಯಲ್ಲಿ ದೋಷ ಇದೆ ಮತ್ತು ಅದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಗುರುವಾರ ಕೇಂದ್ರ ಸರ್ಕಾರ ಪ್ರತಿಪಾದಿಸಿದೆ.
ಸಿಬಿಐ ವಿಶೇಷ ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಟೆಲಿಕಾಂ ಸಟಿವ ಮನೋಜ್ ಸಿನ್ಹಾ ಅವರು, 2012ರಲ್ಲಿ ರದ್ದುಗೊಂಡ ಎಂಟು ಆಪರೇಟರ್ಗಳಿಗೆ ಸೇರಿದ 122 ಟೆಲಿಕಾಂ ಪರವಾನಗಿಗಳ ಆಧಾರದ ಮೇಲೆ ಸಿಬಿಐ ತನಿಖೆ ನಡೆಸಿರುವುದರಿಂದ ಆರೋಪಿಗಳು ಖುಲಾಸೆಗೊಂಡಿದ್ದಾರೆ ಎಂದಿದ್ದಾರೆ.
2001ರಲ್ಲಿ ಯುಪಿಎ ಸರ್ಕಾರ ವಿರಳ ನೈಸರ್ಗಿಕ ಸಂಪನ್ಮೂಲಗಳನ್ನು ಹರಾಜು ಪ್ರಕ್ರಿಯೆಯಲ್ಲೇ ತಪ್ಪು ಮಾಡಿದೆ. ಮೊದಲು ಬಂದವರಿಗೆ ಮೊದಲ ಆಧ್ಯತೆ ಎಂಬ ಆಧಾರದ ಮೇಲೆ ಸ್ಪೆಕ್ಟ್ರಂ ಹಂಚಿಕೆ ಮಾಡಿರ ನೀತಿಯೇ ಭ್ರಷ್ಟಾಚಾರದಿಂದ ಕೂಡಿದೆ ಎಂದು ಸಿನ್ಹಾ ಆರೋಪಿಸಿದ್ದಾರೆ.
2ಜಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಹಗರಣದ ಪ್ರಮುಖ ಆರೋಪಿಗಳಾಗಿದ್ದ ಕರುಣಾನಿಧಿ ಪುತ್ರಿ ಕನ್ನಿಮೋಳಿ, ಸಂಬಂಧಿ ಎ ರಾಜಾ ಅವರನ್ನೂ ಸೇರಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ನಿರಪರಾಧಿಗಳೆಂದು ಖುಲಾಸೆಗೊಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ