ಸಂಗ್ರಹ ಚಿತ್ರ 
ದೇಶ

20ನೇ ವಾರ್ಷಿಕ ಗಡಿ ಸಮಾಲೋಚನೆ: ಚೀನಾ-ಇಂಡೋ ಭದ್ರತಾ ಸಲಹೆಗಾರರ ಚರ್ಚೆ

ದೆಹಲಿಯಲ್ಲಿ ನಡೆಯುತ್ತಿರುವ 20ನೇ ಇಂಡೋ-ಚೀನಾ ಗಡಿ ಸಮಾಲೋಚನಾ ಸಭೆಯಲ್ಲಿ ಚೀನಾದ ಕೌನ್ಸಿಲರ್ ಯಾಂಗ್ ಜೀಚಿ ಮತ್ತು ಭಾರತದ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಪಾಲ್ಗೊಂಡು ಚರ್ಚೆ ನಡೆಸಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ 20ನೇ ಇಂಡೋ-ಚೀನಾ ಗಡಿ ಸಮಾಲೋಚನಾ ಸಭೆಯಲ್ಲಿ ಚೀನಾದ ಕೌನ್ಸಿಲರ್ ಯಾಂಗ್ ಜೀಚಿ ಮತ್ತು ಭಾರತದ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಪಾಲ್ಗೊಂಡು ಚರ್ಚೆ ನಡೆಸಿದ್ದಾರೆ.
ಇಂಡೋ-ಚೀನಾ ಶೀತಲ ಸಮರಕ್ಕೆ ಕಾರಣವಾಗಿದ್ದ ಡೊಕ್ಲಾಂ ಗಡಿ ಅತಿಕ್ರಮಣ ವಿಚಾರಕ್ಕೆ ಸಂಬಂಧಿಸಿದಂತೆ ಉಭಯ ನಾಯಕರು ಚರ್ಚೆ ನಡೆಸಿದ್ದು, ಡೊಕ್ಲಾಂ ವಿವಾದದ ಬಳಿಕ ನಡೆಯುತ್ತಿರುವ ಮೊದಲ ಗಡಿ ಸಮಾಲೋಚನಾ  ಸಭೆಯಾಗಿದೆ. ಸಭೆಯಲ್ಲಿ ಪ್ರಮುಖವಾಗಿ 73 ದಿನಗಳ ಕಾಲ ಇಂಡೋ-ಚೀನಾ ಗಡಿ ಪ್ರಕ್ಷುಬ್ಧತೆಗೆ ಕಾರಣವಾಗಿದ್ದ ಡೊಕ್ಲಾಂ ವಿವಾದ ಸಂಬಂಧ ಚರ್ಚೆ ನಡೆಯಲಿದ್ದು, ಇದರೊಂದಿಗೆ ಸುಮಾರು 4000 ಕಿ.ಮೀ ಉದ್ದದ ಇಂಡೋ-ಚೀನಾ  ಗಡಿ ವಿಚಾರಗಳ ಕುರಿತು ಮಾತುಕತೆ ನಡೆಸಲಿದ್ದಾರೆ.
ಗಡಿ ಪ್ರದೇಶದಲ್ಲಿ ಶಾಂತಿ ಸ್ಥಾಪನೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಈ ಸಭೆಯ ಪ್ರಮುಖ ಉದ್ದೇಶವಾಗಿದ್ದು, 2003ರಿಂದಲೂ ಪ್ರತೀ ವರ್ಷ ಉಭಯ ದೇಶಗಳಲ್ಲಿ ಈ ಸಭೆ ಆಯೋಜನೆಗೊಳ್ಳುತ್ತಾ ಬಂದಿದೆ. ಇದರ ಬೆನ್ನಲ್ಲೇ ರಷ್ಯಾ  ಇಂಡಿಯಾ ಚೀನಾ ಸದಸ್ಯರನ್ನೊಳಗೊಂಡ ಸಮ್ಮೇಳನ ನಡೆಯಲಿದೆ. 
ಈ ಹಿಂದೆ ಚೀನಾದಲ್ಲಿ ನಡೆದ ಬ್ರಿಕ್ಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಭಾರತ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು, ಡೊಕ್ಲಾಂ ವಿವಾದ ಸಂಬಂಧ ಚೀನಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ  ಉಭಯ ದೇಶಗಳು ವಿವಾದಿತ ಗಡಿಯಲ್ಲಿರುವ ತಮ್ಮ ಸೇನೆಯನ್ನು ವಾಪಸ್ ಕರೆಸಿಕೊಂಡಿದ್ದವು. ಇದೀಗ ಮತ್ತೆ ವಿವಾದಿತ ಡೊಕ್ಲಾಂ ಗಡಿಯಲ್ಲಿ ಚೀನಾ ಸೈನಿಕರು ಮೊಕ್ಕಾಂ ಹೂಡಿದ್ದು, ಕ್ಯಾಂಪ್ ಗಳನ್ನು ನಿರ್ಮಿಸಿಕೊಂಡಿದ್ದಾರೆ ಎಂಬ  ಆರೋಪಗಳು ಕೇಳಿ ಬಂದಿವೆ. ಈ ಹಿನ್ನಲೆಯಲ್ಲಿ ಇಂದಿನ ಸಭೆ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT