ಲಾಲು ಪ್ರಸಾದ್ ಯಾದವ್ 
ದೇಶ

ತನ್ನನ್ನು ತಾನು ನೆಲ್ಸನ್ ಮಂಡೇಲಾ, ಅಂಬೇಡ್ಕರ್ ಗೆ ಹೋಲಿಸಿಕೊಂಡ ಲಾಲು

ಬಹುಕೋಟಿ ಮೇವು ಹಗರಣದಲ್ಲಿ ತಪ್ಪಿತಸ್ಥರಾಗಿ ಜೈಲು ಪಾಲಾಗಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್....

ರಾಂಚಿ: ಬಹುಕೋಟಿ ಮೇವು ಹಗರಣದಲ್ಲಿ ತಪ್ಪಿತಸ್ಥರಾಗಿ ಜೈಲು ಪಾಲಾಗಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ತಮ್ಮನ್ನು ತಾವು ವರ್ಣಬೇಧ ನೀತಿ ವಿರೋಧಿ ಹೋರಾಟಗಾರ ನೆಲ್ಸನ್ ಮಂಡೇಲಾ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜತೆ ಹೋಲಿಸಿಕೊಂಡಿದ್ದಾರೆ.

ತೀರ್ಪು ಪ್ರಕಟಗೊಂಡ ನಂತರ ಸರಣಿ ಟ್ವೀಟ್ ಮಾಡಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯು ತನ್ನ ಲಾಭಕ್ಕಾಗಿ ಮತ್ತು ವೋಟ್ ಬ್ಯಾಂಕ್ ಗಾಗಿ ಪ್ರತಿಪಕ್ಷಗಳ ಬಗ್ಗೆ ಜನರಲ್ಲಿ ಅಪನಂಬಿಕೆ ಬಿತ್ತುವ ಕೆಟ್ಟ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ಹೇಳಿದ್ದಾರೆ.

‘ನೆಲ್ಸನ್ ಮಂಡೇಲಾ, ಮಾರ್ಟಿನ್ ಲೂಥರ್ ಕಿಂಗ್ಸ್, ಬಾಬಾ ಸಾಹೇಬ್ ಅಂಬೇಡ್ಕರ್ ತಮ್ಮ ಪ್ರಯತ್ನಗಳಲ್ಲಿ ಸೋತಿದ್ದರೆ ಚರಿತ್ರೆ ಅವರನ್ನು ಖಳನಾಯಕರಾಗಿಸುತ್ತಿತ್ತು. ಅವರು ಈಗಲೂ ಕೆಲವರಿಗೆ ‌ಪೂರ್ವಗ್ರಹಗಳುಳ್ಳವರು, ಜನಾಂಗೀಯವಾದಿ, ಜಾತಿವಾದಿ ಮನಸ್ಸುಗಳಿಗೆ ಖಳನಾಯಕರಂತೆಯೇ ಕಾಣಿಸುತ್ತಾರೆ. ಅವರಿಂದ ಇದಕ್ಕಿಂತ ಭಿನ್ನವಾದುದನ್ನು ನಿರೀಕ್ಷಿಸಲು ಸಾಧ್ಯವಿಲ್ಲ’ ಎಂದು ಲಾಲು ಟ್ವೀಟ್ ಮಾಡಿದ್ದಾರೆ.

ಲಾಲು ಪ್ರಸಾದ್ ಯಾದವ್ ಅವರು, ಬಿಜೆಪಿಯನ್ನು ಟೀಕಿಸುವ ಅಂತ್ಯ ಪ್ರಾಸವುಳ್ಳ ಕವನವೊಂದನ್ನೂ ಟ್ವೀಟ್ ಮಾಡಿದ್ದು, ‘ಕಮಲ್ ಕಾ ಫೂಲ್ ಆಲ್‌ವೇಸ್ ಬನಾವಿಂಗ್ ಏಪ್ರಿಲ್ ಫೂಲ್, ರಹ್‌ನಾ ಕೂಲ್‌ ನ ಕರ್‌ನಾ ಭೂಲ್, ಚಟ್‌ನಾ ಧೂಲ್ (ಕಮಲದ ಹೂ ಯಾವತ್ತೂ ಏಪ್ರಿಲ್ ಫುಲ್ ಆಗುತ್ತದೆ. ಸಹನೆಯಿಂದ, ಯಾವುದೇ ತಪ್ಪು ಮಾಡದೆ ಇರುವುದರಿಂದ ಮಣ್ಣುಮುಕ್ಕಿಸಬಹುದು)’ಎಂದು ಬರೆದುಕೊಂಡಿದ್ದಾರೆ.

ಇದೇ ವೇಳೆ ‘ನೆಲ್ಸನ್ ಮಂಡೇಲಾ, ಮಾರ್ಟಿನ್ ಲೂಥರ್ ಕಿಂಗ್ಸ್, ಬಾಬಾ ಸಾಹೇಬ್ ಅಂಬೇಡ್ಕರ್ ತಮ್ಮ ಪ್ರಯತ್ನಗಳಲ್ಲಿ ಸೋತಿದ್ದರೆ ಚರಿತ್ರೆ ಅವರನ್ನು ಖಳನಾಯಕರಾಗಿಸುತ್ತಿತ್ತು. ಅವರು ಈಗಲೂ ಕೆಲವರಿಗೆ ‌ಪೂರ್ವಗ್ರಹಗಳುಳ್ಳವರು, ಜನಾಂಗೀಯವಾದಿ, ಜಾತಿವಾದಿ ಮನಸ್ಸುಗಳಿಗೆ ಖಳನಾಯಕರಂತೆಯೇ ಕಾಣಿಸುತ್ತಾರೆ. ಅವರಿಂದ ಇದಕ್ಕಿಂತ ಭಿನ್ನವಾದುದನ್ನು ನಿರೀಕ್ಷಿಸಲು ಸಾಧ್ಯವಿಲ್ಲ’ ಎಂದು ಲಾಲು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT