ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ 
ದೇಶ

ಪ್ರಧಾನಿ ಮೋದಿ, ರಾಹುಲ್ ಗುಜರಾತ್ ದೇಗುಲ ಭೇಟಿ ಅಪ್ಪಟ ವೋಟ್' ಬ್ಯಾಂಕ್ ರಾಜಕೀಯ: ಓವೈಸಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗುಜರಾತ್ ರಾಜ್ಯದ ದೇಗುಲಕ್ಕೆ ಭೇಟಿ ನೀಡುತ್ತಿರುವುದು ಅಪ್ಪಟ ವೋಟ್'ಬ್ಯಾಂಕ್ ರಾಜಕೀಯ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿಯವರು...

ಹೈದರಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗುಜರಾತ್ ರಾಜ್ಯದ ದೇಗುಲಕ್ಕೆ ಭೇಟಿ ನೀಡುತ್ತಿರುವುದು ಅಪ್ಪಟ ವೋಟ್'ಬ್ಯಾಂಕ್ ರಾಜಕೀಯ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿಯವರು ಶನಿವಾರ ಹೇಳಿದ್ದಾರೆ. 
ಹೈದರಾಬಾದ್ ನಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿರುವ ಅವರು, ಕಾಂಗ್ರೆಸ್ ನಾಯಕರು ಮತ್ತುಬಿಜೆಪಿ ನಾಯಕರನ್ನು ನೋಡಿದರೆ ಅವರು ಚುನಾವಣಾ ಪ್ರಚಾರವನ್ನು ಮಾಡುತ್ತಿರುವುದಂತೆ ಕಾಣುತ್ತಿಲ್ಲ. ತಮ್ಮಿಂದ ಸಾಧ್ಯವಾದಷ್ಟು ದೇಗುಲಗಳಿಗೆ ಭೇಟಿ ನೀಡುತ್ತಿರುವಂತೆ ಕಾಣಿಸುತ್ತಿದೆ. ವಿಧಾನಸಭೆ ಹಾಗೂ ಸಂಸತ್ತು ಚುನಾವಣೆಗಳು ಆರಂಭಗೊಂಡಾಗ ಯಾತ್ರೆ ಹೇಗಿರುತ್ತದೆ ಎಂಬುದನ್ನು ತೋರಿಸುತ್ತೇನೆಂದು ಹೇಳಿದ್ದಾರೆ. 
ಚುನಾವಣಾ ಪ್ರಚಾರ ಸಂದರ್ಭದಲ್ಲಿ ನಾನೂ ಕೂಡ ಮಸೀದಿ ಹಾಗೂ ದರ್ಗಾಗಳಿಗೆ ಭೇಟಿ ನೀಡುತ್ತೇನೆ. ಹಸಿರು ಧ್ವಜವನ್ನು ಹಿಡಿಯುತ್ತೇನೆ. ಬಿಜೆಪಿ ನಾಯಕರು ಕೇಸರಿ ಧರಿಸಿದ್ದಾರೋ, ಇಲ್ಲವೋ ಎಂಬುದರ ಬಗ್ಗೆ ನಾವು ಆಲೋಚಿಸುತ್ತಿಲ್ಲ. ಆದರೆ, ನಾವು ಪ್ರಚಾರ ಸಂದರ್ಭದಲ್ಲಿ ಹಸಿರನ್ನು ತೊಡುತ್ತೇವೆಂದು ತಿಳಿಸಿದ್ದಾರೆ. 
ಇದೇ ವೇಳೆ ಪ್ರಧಾನಿ ಮೋದಿಯವರು ಸಬರ್ಮತಿ ನದಿ ಬಳಿ ನಡೆಸಿದ ಸೀ ಪ್ಲೇನ್ ಹಾರಾಟ ಕುರಿತಂತೆ ಓವೈಸಿ ಕಿಡಿಕಾರಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT