ಆದಿತ್ಯ ಠಾಕ್ರೆ 
ದೇಶ

ಚುನಾವಣೆಗೆ ಸ್ಪರ್ಧಿಸುವ ವಯಸ್ಸಿನ ಮಿತಿ 21 ಅಥವಾ 18ಕ್ಕೆ ಇಳಿಸಬೇಕು: ಆದಿತ್ಯ ಠಾಕ್ರೆ

ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ವಯಸ್ಸಿನ ಮಿತಿ ಕನಿಷ್ಠ 21 ಅಥವಾ 18ಕ್ಕೆ ಇಳಿಸಬೇಕು ಎಂದು ಯುವ...

ಮುಂಬೈ: ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ವಯಸ್ಸಿನ ಮಿತಿ ಕನಿಷ್ಠ 21 ಅಥವಾ 18ಕ್ಕೆ ಇಳಿಸಬೇಕು ಎಂದು ಯುವ ಸೇನಾ ಅಧ್ಯಕ್ಷ ಆದಿತ್ಯ ಠಾಕ್ರೆ ಅವರು ಶನಿವಾರ ಒತ್ತಾಯಿಸಿದ್ದಾರೆ.
ಪ್ರಸ್ತುತ ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಗೆ ಸರ್ಧಿಸಲು ಕನಿಷ್ಠ 25 ವರ್ಷ ವಯಸ್ಸಾಗಿರಬೇಕು ಎಂಬ ನಿಯಮವಿದೆ.
18ನೇ ವಯಸ್ಸಿಗೆ ಮತ ಹಾಕಲು ಅವಕಾಶವಿರಬೇಕಾದರೆ 18ನೇ ವಯಸ್ಸಿಗೆ ಚುನಾವಣೆಗೆ ಏಕೆ ಸ್ಪರ್ಧಿಸಬಾರದು ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರು ಪ್ರಶ್ನಿಸಿದ್ದಾರೆ.
ಕೆಲವು ದೇಶಗಳಲ್ಲಿ 18ನೇ ವಯಸ್ಸಿಗೆ ಚುವಾವಣೆಗೆ ಸ್ಪರ್ಧಿಸಲು ಅವಕಾಶವಿದೆ. ನಮ್ಮ ಯುವಕರು ಸಹ ದೇಶದಲ್ಲಿ ಬದಲಾವಣೆ ತರುವ ಸಾಮರ್ಥ್ಯ ಮತ್ತು ಸಾಕಷ್ಟು ಒಳ್ಳೆಯ ವಿಚಾರಗಳನ್ನು ಹೊಂದಿದ್ದಾರೆ ಎಂದು ಅದಿತ್ಯ ಠಾಕ್ರೆ ಅವರು ಟ್ವೀಟ್ ಮಾಡಿದ್ದಾರೆ.
ಚುನಾವಣೆಗೆ ಸ್ಪರ್ಧಿಸುವ ವಯಸ್ಸಿನ ಮಿತಿ ಇಳಿಸುವುದರಿಂದ ಯುವಕರಿಗೆ ಸಹಾಯವಾಗಲಿದೆ ಮತ್ತು ಅವರು ಶಾಸಕಾಂಗದ ಭಾಗವಾಗಲಿದ್ದಾರೆ ಎಂದು ಪಿಟಿಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT