ಆರ್ ಎಸ್ಎಸ್ ಸ್ವಯಂ ಸೇವಕರು 
ದೇಶ

ತುರ್ತು ಪರಿಸ್ಥಿತಿಯಲ್ಲಿ ಜೈಲು ಸೇರಿದ್ದ ಸ್ವಯಂ ಸೇವಕರಿಗೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟ

ತುರ್ತು ಪರಿಸ್ಥಿತಿಯಲ್ಲಿ ಅಂದಿನ ಇಂದಿರಾ ಗಾಂಧಿ ನೇತೃತ್ವದ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದ ಸ್ವಯಂ ಸೇವಕರಿಗೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟ ನೀಡಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ.

ನಾಗ್ಪುರ: ಆರ್ ಎಸ್ಎಸ್ ನ ಕಾರ್ಯಕರ್ತರಷ್ಟೇ ಅಲ್ಲದೇ ತುರ್ತು ಪರಿಸ್ಥಿತಿಯಲ್ಲಿ ಯಾರೆಲ್ಲಾ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದರೋ ಅವರೆಲ್ಲರಿಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಥಾನ ಮಾನ ನೀಡಲು ತೀರ್ಮಾನಿಸಲಾಗಿದೆ. ಆದರೆ ಆರ್ ಎಸ್ಎಸ್ ಈ ಪ್ರಸ್ತಾವನೆಯನ್ನು ವಿರೋಧಿಸಿದೆ ಎಂದು ಹೇಳಲಾಗುತ್ತಿದೆ. 
ಬಿಜೆಪಿ ಸದಸ್ಯ ಏಕಾಂತ್ ಖಡ್ಸೆ ವಿಧಾನಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಈ ವಿಷಯಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಸ್ತಾವನೆ ನಮ್ಮ ಮುಂದಿದೆ. ಹೊಸ ವರ್ಷದಲ್ಲಿ ನಡೆಯಲಿರುವ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ತುರ್ತು ಪರಿಸ್ಥಿತಿಗೆ ವಿರುದ್ಧವಾಗಿ ಹೋರಾಡಿದವರಿಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಥಾನಮಾನ ನೀಡುವ ವಿಷಯ ಚರ್ಚೆಯಾಗಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT