ಹುರಿಯತ್ ಪ್ರತ್ಯೇಕತಾವಾದಿ ಸೈಯ್ಯದ್ ಅಲಿ ಶಾ ಗಿಲಾನಿ 
ದೇಶ

ಉಗ್ರರಿಗೆ ಆರ್ಥಿಕ ನೆರವು: ಗಿಲಾನಿ ಪುತ್ರನಿಗೆ ಸಮನ್ಸ್ ಜಾರಿ ಮಾಡಿದ ಎನ್ಐಎ

ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸುವ ಸಲುವಾಗಿ ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯತ್ ಪ್ರತ್ಯೇಕತಾವಾದಿ ಸೈಯ್ಯದ್ ಅಲಿ ಶಾ ಗಿಲಾನಿಯವರ ಪುತ್ರನಿಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶನಿವಾರ...

ನವದೆಹಲಿ: ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸುವ ಸಲುವಾಗಿ ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹುರಿಯತ್ ಪ್ರತ್ಯೇಕತಾವಾದಿ ಸೈಯ್ಯದ್ ಅಲಿ ಶಾ ಗಿಲಾನಿಯವರ ಪುತ್ರನಿಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶನಿವಾರ ಸಮನ್ಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ. 
ಗಿಲಾನಿಯವರ ಪುತ್ರ ನಸೀಮ್ ಗಿಲಾನಿಯವರಿಗೆ ಎನ್ಐಎ ಅಧಿಕಾರಿಗಳು ಸಮನ್ಸ್ ಮಾಡಿದ್ದು, ಪ್ರಕರಣ ಸಂಬಂಧ ವಿಚಾರಣೆ ನಡೆಸುವ ಅಗತ್ಯವಿದ್ದು, ವಿಚಾರಣೆಗಾಗಿ ದೆಹಲಿಗೆ ಆಗಮಿಸುವಂತೆ ಸೂಚಿಸಿದ್ದಾರೆಂದು ವರದಿಗಳು ತಿಳಿಸಿವೆ. 
ನಸೀಮ್ ಶ್ರೀನಗರದಲ್ಲಿರುವ ಶೆರ್-ಇ-ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 
ಸಮನ್ಸ್ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಎನ್ಐಎ ಅಧಿಕಾರಿಗಳು, ಗಿಲಾನಿ ಪುತ್ರ ನಸೀಮ್ ಗಿಲಾನಿಯವರಿಗೆ ನಾವು ಸಮನ್ಸ್ ಜಾರಿದ್ದು, ಮುಂದಿನ ವಾರ ದೆಹಲಿಯಲ್ಲಿರುವ ಎನ್ಐಎ ಪ್ರಧಾನ ಕಚೇರಿಗೆ ಆಗಮಿಸುವಂತೆ ಸೂಚಿಸಿದ್ದೇವೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT