ಹೈದರಾಬಾದ್ ನ ಮಳಿಗೆಯೊಂದರಲ್ಲಿ ಸಂತ ಕ್ಲಾಸ್ ನ ಅಲಂಕಾರ ಮಾಡಿರುವ ದೃಶ್ಯ 
ದೇಶ

ನಾಳೆ ಕ್ರಿಸ್ ಮಸ್ ಹಬ್ಬ: ಭರದ ಸಿದ್ಧತೆಯಲ್ಲಿ ತೊಡಗಿರುವ ನಾಗರಿಕರು

ಕ್ರಿಸ್ ಮಸ್ ಹಬ್ಬದ ಆಚರಣೆಗೆ ದೇಶಾದ್ಯಂತ ಭರದ ಸಿದ್ಧತೆ ನಡೆಯುತ್ತಿದ್ದು, ಜೀಸಸ್ ಕ್ರೈಸ್ತನ ...

ನವದೆಹಲಿ: ಕ್ರಿಸ್ ಮಸ್ ಹಬ್ಬದ ಆಚರಣೆಗೆ ದೇಶಾದ್ಯಂತ ಭರದ ಸಿದ್ಧತೆ ನಡೆಯುತ್ತಿದ್ದು, ಜೀಸಸ್ ಕ್ರೈಸ್ತನ ಹುಟ್ಟುಹಬ್ಬವನ್ನು ಸಂಭ್ರಮ-ಸಡಗರಗಳಿಂದ ಆಚರಿಸಲು ಜನರು ಕಾತರದಿಂದ ಕಾಯುತ್ತಿದ್ದಾರೆ.
ಕ್ರಿಸ್ ಮಸ್ ಹಬ್ಬ ಕೇವಲ ಕ್ರೈಸ್ತ ಧರ್ಮದವರಿಗೆ ಮಾತ್ರವಲ್ಲದೆ ಇಡೀ ಸಮಾಜದ ಬಾಂಧವರು ಆಚರಿಸುವ ಒಂದು ಹಬ್ಬವೆನಿಸಿದೆ. ಜಾತಿ, ಧರ್ಮಗಳನ್ನು ಹೊರತುಪಡಿಸಿ ಸಮಾಜದಲ್ಲಿ ಶಾಂತಿ, ಸಮೃದ್ಧಿ ನೆಲೆಸಲು ಪ್ರಾರ್ಥಿಸುವುದು ಕ್ರಿಸ್ ಮಸ್ ಹಬ್ಬ ಆಚರಣೆಯ ಮುಖ್ಯ ಸಂದೇಶವಾಗಿದೆ.
ಕ್ರಿಸ್ ಮಸ್, ಹೊಸ ವರ್ಷದ ಸಂದರ್ಭದಲ್ಲಿ ಸಾಲು, ಸಾಲು ರಜೆಗಳು ಬರುವುದರಿಂದ ನಗರ ಪ್ರದೇಶಗಳಲ್ಲಿ ಇನ್ನೂ ಹೆಚ್ಚಿನ ಸಂಭ್ರಮದಿಂದ ಜನರು ಹಬ್ಬ ಆಚರಿಸುತ್ತಾರೆ.
ದೇಶದ ಹಲವು ಕಡೆಗಳಲ್ಲಿ ಮಾರುಕಟ್ಟೆಗಳಲ್ಲಿ ಕ್ರಿಸ್ ಮಸ್ ಹಬ್ಬಕ್ಕೆ ಸಂಬಂಧಿಸಿದ ಅಲಂಕಾರಿಕ ವಸ್ತುಗಳ ಮಾರಾಟ ಭರದಿಂದ ನಡೆಯುತ್ತಿದೆ. 
ಸಂತ ಕ್ಲಾಸ್ ನ ಕಟೌಟ್ ಗಳು, ಕ್ರಿಸ್ ಮಸ್ ಸ್ಟಾರ್ ವಿವಿಧ ಬಣ್ಣ ಮತ್ತು ಆಕಾರಗಳಲ್ಲಿ, ದೀಪಗಳ ವ್ಯಾಪಾರಗಳು ಮಾರುಕಟ್ಟೆಗಳಲ್ಲಿ ಭರ್ಜರಿಯಾಗಿ ನಡೆಯುತ್ತಿವೆ. ಸರಕು ಮತ್ತು ಸೇವಾ ತೆರಿಗೆ ಜಾರಿಯಿಂದ ಈ ವರ್ಷ ಕ್ರಿಸ್ ಮಸ್ ನಲ್ಲಿ ವ್ಯಾಪಾರದ ಮೇಲೆ ಹೊಡೆತ ಬೀಳಬಹುದು ಎಂದು ವ್ಯಾಪಾರಿಗಳು ಹೇಳುತ್ತಿದ್ದರೂ ಕೂಡ ನಗರ ಪ್ರದೇಶಗಳಲ್ಲಿ ಎಂದಿನಂತೆ ವಹಿವಾಟು ನಡೆಯುವುದು ಕಂಡುಬರುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT