ಟಿಟಿವಿ ದಿನಕರನ್ 
ದೇಶ

ತಮಿಳುನಾಡು ಸರ್ಕಾರ 3 ತಿಂಗಳಲ್ಲಿ ಪತನವಾಗಲಿದೆ: ಟಿಟಿವಿ ದಿನಕರನ್

ತಮಿಳುನಾಡಿನ ಆರ್ ಕೆ ನಗರ ವಿಧಾನಸಭೆಯ ಉಪಚುನಾವಣೆಯಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಎಐಎಡಿಎಂಕೆ ಯ ಬಂಡಾಯ ನಾಯಕ ಟಿಟಿವಿ ದಿನಕರನ್, ತಮಿಳುನಾಡಿನ ಸರ್ಕಾರ ಕೆಲವೇ ತಿಂಗಳಲ್ಲಿ...

ಚೆನ್ನೈ: ತಮಿಳುನಾಡಿನ ಆರ್ ಕೆ ನಗರ ವಿಧಾನಸಭೆಯ ಉಪಚುನಾವಣೆಯಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಎಐಎಡಿಎಂಕೆ ಯ ಬಂಡಾಯ ನಾಯಕ ಟಿಟಿವಿ ದಿನಕರನ್, ತಮಿಳುನಾಡಿನ ಸರ್ಕಾರ ಕೆಲವೇ ತಿಂಗಳಲ್ಲಿ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. 
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ದಿನಕರನ್, ಹೆಸರಿಗಷ್ಟೇ ನಾನು ಪಕ್ಷೇತರ ಅಭ್ಯರ್ಥಿ, ಆದರೆ ಎಐಎಡಿಎಂಕೆಯ ಎಲ್ಲಾ ಕಾರ್ಯಕರ್ತರು ನನ್ನೊಂದಿಗೆ ಇದ್ದಾರೆ. ನನಗೆ ಅಮ್ಮನ (ಜಯಲಲಿತ) ಆಶೀರ್ವಾದವಿದೆ ಎಂದು ಹೇಳಿದ್ದು, ಈ ಸರ್ಕಾರ 3 ತಿಂಗಳಲ್ಲಿ ಪತನವಾಗಲಿದೆ ಎಂದು ಹೇಳಿದ್ದಾರೆ. 

ಆ ಕೆ ನಗರ ವಿಧಾನಸಭಾ ಕ್ಷೇತ್ರವನ್ನು ಅಮ್ಮ ಪ್ರತಿನಿಧಿಸುತ್ತಿದ್ದರು, ಈ ಕ್ಷೇತ್ರದಲ್ಲಿ ಜನತೆ ನೀಡಿರುವ ಬಹುಮತ ಪಕ್ಷ ಹಾಗೂ ಪಕ್ಷದ ಚಿಹ್ನೆ ಉಳಿಯಲಿದೆ ಎಂಬುದರ ಸಂಕೇತ, ನನಗೆ ಬೆಂಬಲ ನೀಡಿರುವ ಕ್ಷೇತ್ರದ ಜನತೆ ಹಾಗೂ ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ದಿನಕರನ್ ಹೇಳಿದ್ದಾರೆ. 

ಆರ್ ಕೆ ನಗರದ ಉಪಚುನಾವಣೆ ಮತ ಎಣಿಕೆಯಲ್ಲಿ ಟಿಟಿವಿ ದಿನಕರನ್ 39000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT