Deepa 
ದೇಶ

ಚೆನ್ನೈ: ಜಯಲಲಿತಾ ಸೊಸೆ ದೀಪಾ ಪಕ್ಷದ ಕಚೇರಿ ಮೇಲೆ ಕಲ್ಲು ತೂರಾಟ

ತಮಿಳುನಾಡು ರಾಜ್ಯ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಸೋದರ ಸೊಸೆ ದೀಪಾ ಜಯಕುಮಾರ್ ಅವರ ಪಕ್ಷದ ಕಚೇರಿ ಮೇಲೆ ಅನಾಮಧೇಯ ವ್ಯಕ್ತಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದೆ ಎಂದು ಮಂಗಳವಾರ ತಿಳಿದುಬಂದಿದೆ...

ಚೆನ್ನೈ: ತಮಿಳುನಾಡು ರಾಜ್ಯ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಸೋದರ ಸೊಸೆ ದೀಪಾ ಜಯಕುಮಾರ್ ಅವರ ಪಕ್ಷದ ಕಚೇರಿ ಮೇಲೆ ಅನಾಮಧೇಯ ವ್ಯಕ್ತಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದೆ ಎಂದು ಮಂಗಳವಾರ ತಿಳಿದುಬಂದಿದೆ. 
ಪಕ್ಷದ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ದೀಪಾ ಅವರು, ಇಂದು ಮಧ್ಯಾಹ್ನ 12.30ರ ಸುಮಾರಿಗೆ ಅನಾಮಧೇಯ ಗುಂಪೊಂದು ಇದ್ದಕ್ಕಿದ್ದಂತೆ ಟಿ.ನಗರದಲ್ಲಿರುವ ಪಕ್ಷದ ಕಚೇರಿ ಮುಂದೆ ಬಂದು ಕಲ್ಲು ತೂರಾಟ ನಡೆಸಿದರು ಎಂದು ಹೇಳಿದ್ದಾರೆ. 
ಘಟನೆಯಲ್ಲಿ ಕಚೇರಿಯ ಕಿಟಕಿಯ ಗಾಜುಗಳು ಹಾನಿಗೊಳಗಾಗಿದ್ದು, ಘಟನಾ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 
ಘಟನೆ ಹಿಂದೆ ಪರಿಚಯಸ್ಥರ ಕೈವಾಡವಿದೆ. ಘಟನೆ ಸಂಬಂಧ ಮಂಬಲಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸು ತನಿಖೆ ಆರಂಭಿಸಿದ್ದಾರೆಂದು ದೀಪಾ ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT