ಸೈಯದ್ ಅಲಿ ಶಾ ಗಿಲಾನಿ 
ದೇಶ

ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಬೆಂಬಲ: ಹುರಿಯತ್ ನಾಯಕ ಗಿಲಾನಿ ಪುತ್ರನಿಂದ ಎನ್ ಐಎ ಸಮನ್ಸ್ ನಿರ್ಲಕ್ಷ

ಕಾಶ್ಮೀರ ಕಣಿವೆಯಲ್ಲಿ ಶಾಂತಿ ಕದಡಲು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಿಂದ ನಿಧಿ ಸಂಗ್ರಹಿಸುವ ಆರೋಪ್ದ ತನಿಖೆಗೆ ಸಂಬಂಧಿಸಿದಂತೆ.......

ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಶಾಂತಿ ಕದಡಲು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಿಂದ ನಿಧಿ ಸಂಗ್ರಹಿಸುವ ಆರೋಪ್ದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಸಮನ್ಸ್ ನ್ನು ಹುರಿಯತ್ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಷಾ ಗಿಲಾನಿಯ ಕಿರಿಯ ಪುತ್ರ ನಸೀಮ್ ಗಿಲಾನಿ ನಿರ್ಲಕ್ಷಿಸಿದ್ದಾರೆ.
ಇಂದು ಗಿಲಾನಿ ತನಿಖೆಗೆ ಹಾಜರಾಗಲಿಲ್ಲ ಎಂದು ಎನ್ ಐ ಎ ಅಧಿಕಾರಿಗಳು ಐಎ ಎನ್ ಎಸ್ ಗೆ ತಿಳಿಸಿದ್ದಾರೆ. ಇದರ ಹೊರತಾಗಿ ಇನ್ನಾವ ಹೊಸ ಸಮನ್ಸ್ ನೀದಲಾಗುತ್ತದೆಯೆ ಎನ್ನುವ ಪ್ರಶ್ನೆಗೆ ಅಧಿಕಾರಿಗಳು ಉತ್ತರಿಸಲು ನಿರಾಕರಿಸಿದ್ದಾರೆ.
ದಕ್ಷಿಣ ದೆಹಲಿಯ ಲೋಧಿ ರಸ್ತೆ ಕೇಂದ್ರ ಕಛೇರಿಗೆ ಹಾಜರಾಗಲು ಕಳೆದ ವಾರ ಶ್ರೀನಗರದ ಶೇರ್-ಇ-ಕಾಶ್ಮೀರ ಕೃಷಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ನಸೀಮ್ ಅವರಿಗೆ ಎನ್ ಐ ಎ ಸಮನ್ಸ್ ನಿಡಿತ್ತು.  ಇಷ್ಟೇ ಅಲ್ಲದೆ ಎನ್ಐಎ ಎರಡು ಬಾರಿ ನಸೀಮ್ ರನ್ನು ವಿಚಾರಣೆ ನಡೆಸಿದೆ. ತನಿಖಾ ದಳವು ನಸೀಮ್ ನ ಹಿರಿಯ ಸಹೋದರ ವೃತ್ತಿಯಲ್ಲಿ ವೈದ್ಯನಾಗಿರುವ ನಯೆಮ್ ನನ್ನು ಸಹ ವಿಚಾರಣೆಗೆ ಒಳಪಡಿಸಿತ್ತು..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT