ದೇಶ

ಗಾಡಿಯಾಚೆ ಪಾಕ್ ಸೈನಿಕರು, ಗಡಿಯೊಳಗೆ ಪಾಕ್ ಉಗ್ರರ ಮೇಲೆ ಮುಗಿಬಿದ್ದ ಭಾರತೀಯ ಸೇನೆ

Srinivasamurthy VN
ಶ್ರೀನಗರ: ಅತ್ತ ಗಡಿಯಾಚೆ ಪಾಕಿಸ್ತಾನಿ ಸೈನಿಕರನ್ನು ಭಾರತೀಯ ಸೈನಿಕರು ಕೊಂದಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಇತ್ತ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡಿದ್ದ ಉಗ್ರರ ಮೇಲೆ ಭಾರತೀಯ  ಸೈನಿಕರು ಮುಗಿಬಿದ್ದಿದ್ದು, ಗುಂಡಿನ ದಾಳಿ ನಡೆಸಿ ಓರ್ವ ಉಗ್ರಗಾಮಿಯನ್ನು ಕೊಂದು ಹಾಕಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಪುಲ್ವಾಮ ಜಿಲ್ಲೆಯ ಸೆಂಪೋರಾ ಗ್ರಾಮದಲ್ಲಿ ಅಡಗಿ ಕುಳಿತಿದ್ದ ಉಗ್ರರ ಮೇಲೆ ಸೇನೆ ದಾಳಿ ನಡೆಸಿದ್ದು, ಈ ವೇಳೆ ಓರ್ವ ಉಗ್ರ ಹತನಾಗಿದ್ದಾನೆ. ಮೃತ ಉಗ್ರನನ್ನು ಕುಖ್ಯಾತ ಉಗ್ರ ಸಂಘಟನೆ ಜೈಶ್  ಇ ಮೊಹಮದ್ ಸಂಘಟನೆಯ ಮೋಸ್ಟ್ ವಾಂಟೆಡ್ ಉಗ್ರ ಮೊಹಮದ್ ಎಂದು ಗುರುತಿಸಲಾಗಿದೆ. 
ಅಂತೆಯೇ ಘಟನಾ ಸ್ಥಳದಲ್ಲಿ ಎನ್ ಕೌಂಟರ್ ಮುಂದುವರೆದಿದ್ದು, ಇನ್ನೂ 2 ರಿಂದ ಮೂವರು ಉಗ್ರರು ಅವಿತು ಗುಂಡಿನ ದಾಳಿ ನಡೆಸಿದ್ದಾರೆ. ಅವಿತಿರುವ ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು  ತಿಳಿದುಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ಎಸ್ ಪಿ ವೈದ್ ಅವರು, ಮುಂಜಾಗ್ರತಾ ಕ್ರಮವಾಗಿ ರಾಷ್ಟೀರ ಹೆದ್ದಾರಿಯನ್ನು ಬಂದ್ ಮಾಡಲಾಗಿದ್ದು, ನಾಕಾಬಂದಿ ಹಾಕಲಾಗಿದೆ.  ಅಂತೆಯೇ ಸಮೀಪದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚುವರಿ ಭದ್ರತಾ ಪಡೆಗಳನ್ನು ಕಾರ್ಯಾಚರಣಾ ಪ್ರದೇಶದಲ್ಲಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.
SCROLL FOR NEXT