ಕುಲಭೂಷಣ್ ಜಾದವ್-ಪೋಷಕರ ಭೇಟಿ 
ದೇಶ

ಕುಲಭೂಷಣ್ ಜಾದವ್-ಪೋಷಕರ ಭೇಟಿ ಪಾಕ್ ನ ಕ್ರೂರ ಹಾಸ್ಯ, ಕೇವಲ ನಾಟಕ: ದಲ್ಬೀರ್ ಕೌರ್ ಆಕ್ರೋಶ

ಕುಲಭೂಷಣ್ ಜಾದವ್ ಮತ್ತು ಅವರ ಪೋಷಕರನ್ನು ನೇರವಾಗಿ ಭೇಟಿ ಮಾಡಲು ಅವಕಾಶ ನೀಡದೇ ಕೇವಲ ಗಾಜಿನ ಮೂಲಕ ನೋಡಲು ಅವಕಾಶ ಮಾಡಿಕೊಡುವ ಮೂಲಕ ಪಾಕಿಸ್ತಾನ ಮತ್ತೊಮ್ಮೆ ತನ್ನ ಕ್ರೂರ ಮುಖವನ್ನು ಜಗತ್ತಿಗೆ ಪರಿಚಯಿಸಿದೆ ಎಂದು ದಲ್ಬೀರ್ ಕೌರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಕುಲಭೂಷಣ್ ಜಾದವ್ ಮತ್ತು ಅವರ ಪೋಷಕರನ್ನು ನೇರವಾಗಿ ಭೇಟಿ ಮಾಡಲು ಅವಕಾಶ ನೀಡದೇ ಕೇವಲ ಗಾಜಿನ ಮೂಲಕ ನೋಡಲು ಅವಕಾಶ ಮಾಡಿಕೊಡುವ ಮೂಲಕ ಪಾಕಿಸ್ತಾನ ಮತ್ತೊಮ್ಮೆ ತನ್ನ ಕ್ರೂರ  ಮುಖವನ್ನು ಜಗತ್ತಿಗೆ ಪರಿಚಯಿಸಿದೆ ಎಂದು ದಲ್ಬೀರ್ ಕೌರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನಕ್ಕೆ ತೆರಳಿ ಅಲ್ಲಿ ಬಂಧನಕ್ಕೀಡಾಗಿ ಅಮಾನವೀಯವಾಗಿ ಸಾವನ್ನಪ್ಪಿದ್ದ ಭಾರತೀಯ ಸರಬ್ಡಿತ್ ಸಿಂಗ್ ಅವರ ಸಹೋದರಿ ದಲ್ಬೀರ್ ಕೌರ್, ಕುಲಭೂಷಣ್ ಜಾದವ್ ಪ್ರಕರಣದಲ್ಲಿ ಪಾಕಿಸ್ತಾನದ  ವಿರುದ್ಧ ಮತ್ತೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಕುಲಭೂಷಣ್ ಜಾದವ್ ಮತ್ತು ಅವರ ಪೋಷಕರ ಭೇಟಿ ಕುರಿತಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ದಲ್ಬೀರ್ ಕೌರ್, ಕುಲಭೂಷಣ್ ಜಾದವ್ ಮತ್ತು ಅವರ ಪೋಷಕರ  ಭೇಟಿ ಪ್ರಹಸನ ಪಾಕಿಸ್ತಾನದ ದೊಡ್ಡ ನಾಟಕ. ಗಾಜಿನ ಮೂಲಕ ಪೋಷಕರನ್ನು ತೋರಿಸಿದ್ದು, ಪಾಕಿಸ್ತಾನದ ಕ್ರೂರತೆಗೆ ಹಿಡಿದ ಕನ್ನಡಿಯಾಗಿದ್ದು, ಇದು ಪಾಕಿಸ್ತಾನದ ಕ್ರೂರ ಹಾಸ್ಯ ಎಂದು ದಲ್ಬೀರ್ ಕೌರ್ ಹೇಳಿದ್ದಾರೆ.
ಬಹುಶಃ ಜಾದವ್ ತಾಯಿ ಮತ್ತು ಪತ್ನಿ ಅವರನ್ನು ಕಣ್ಣಾರೆ ನೋಡುವ ಮತ್ತು ಅವರನ್ನು ತಬ್ಬಿಕೊಳ್ಳುವ ಸಲುವಾಗಿ ಭಾರತದಿಂದ ಅಲ್ಲಿಗೆ ತೆರಳಿದ್ದರು. ಆದರೆ ಪಾಕಿಸ್ತಾನ ಇದಕ್ಕೆ ಅವಕಾಶ ಮಾಡಿಕೊಡದೇ ತನ್ನ ಕ್ರೂರತ್ವವನ್ನು  ಮೆರೆದಿದೆ. ತುಂಬಾ ವರ್ಷಗಳ ಬಳಿಕ ಜಾದವ್ ತನ್ನ ತಾಯಿ ಮತ್ತು ಪತ್ನಿಯನ್ನು ನೋಡುತ್ತಿದ್ದು, ಅವರನ್ನು ಗಾಜಿನ ಮೂಲಕ ಪಾಕಿಸ್ತಾನ ಬೇರ್ಪಡಿಸಿದೆ, ಇದು ಜಿನ್ನಾ ಕಟ್ಟಿದ ನಾಡಿನ ಮಾನವೀಯತೆಯ ಪ್ರತೀಕ ಎಂದು ದಲ್ಬೀರ್  ಕೌರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಪಾಕಿಸ್ತಾನ ಈ ಭೇಟಿಯನ್ನು ಮಾನವೀಯತೆ ಎಂದು ಬಿಂಬಿಸಿಕೊಳ್ಳುತ್ತಿರ ಬಹುದು ಆದರೆ ಇದು ಅದರ ಕ್ರೂರತ್ವದ ಪ್ರತೀಕ ಎಂದು ಜಗತ್ತಿಗೇ ಪರಿಚಯವಾಗಿದೆ ಎಂದೂ ಅವರು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?