ಪ್ರಮಾಣ ವಚನ ಸ್ವೀಕರಿಸಿದ ಜೈರಾಮ್ ಠಾಕೂರ್
ಶಿಮ್ಲಾ: ಹಿಮಾಚಲ ಪ್ರದೇಶ ನೂತನ ಮುಖ್ಮಮಂತ್ರಿಯಾಗಿ ಹಿರಿಯ ಬಿಜೆಪಿ ಮುಖಂಡ ಜೈರಾಮ್ ಠಾಕೂರ್ ಅವರು ಬುಧವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು.
ಶಿಮ್ಲಾದ ರಿಜ್ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹಲವು ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಎಲ್ ಕೆ ಅಡ್ವಾಣಿ ಹಾಗೂ ಕೇಂದ್ರ ಸಚಿವರು, ಉನ್ನತ ಬಿಜೆಪಿ ನಾಯಕರು ಮತ್ತು ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಇನ್ನು ನೂತನ ಸಿಎಂ ಜೈರಾಮ್ ಠಾಕೂರ್ ಅವರಿಗೆ ಹಿಮಾಚಲ ಪ್ರದೇಶ ರಾಜ್ಯಪಾಲ ಆಚಾರ್ಯ ದೇವವ್ರತ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಜೈರಾಮ್ ಠಾಕೂರ್ ಅವರೊಂದಿಗೆ ಬಿಜೆಪಿಯ ಕೆಲ ಶಾಸಕರೂ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಇದೇ ಮೊದಲ ಬಾರಿ ಹಿಮಾಚಲ ಪ್ರದೇಶ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭಾರತದ ಪ್ರಧಾನಿಯೊಬ್ಬರು ಪಾಲ್ಗೊಂಡಿದ್ದಾರೆ.
ಇನ್ನು ನೂಚನ ಸಿಎಂ ಠಾಕೂರ್ ಅವರು ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ನ ಚೇತ್ ರಾಮ್ ಅವರನ್ನು ಸೋಲಿಸುವ ಮೂಲಕ ಸಿರಾಜ್ ಕ್ಷೇತ್ರವನ್ನು ಜಯಿಸಿದ್ದರು. 52ರ ಹರೆಯದ ಠಾಕೂರ್ ಅವರು ಈ ಹಿಂದೆ ರಾಜ್ಯದಲ್ಲಿದ್ದ ಬಿಜೆಪಿ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಹಾಯಕ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಇನ್ನು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಪ್ರೇಮ್ ಕುಮಾರ್ ಧುಮಾಲ್ ಅವರು, ಚುನಾವಣೆಯಲ್ಲಿ ಸೋತ ಹಿನ್ನಲೆಯಲ್ಲಿ ಜೈರಾಮ್ ಠಾಕೂರ್ ಅವರಿಗೆ ಸಿಎಂ ಗಾದಿ ಒಲಿದು ಬಂದಿದೆ. ಹಿಮಾಚಲ ಪ್ರದೇಶದ ಒಟ್ಟು 68 ಸ್ಥಾನಗಳ ಪೈಕಿ ಬಿಜೆಪಿ ಪಕ್ಷ ಒಟ್ಟು 44 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos