ಮಹದಾಯಿ ಪ್ರತಿಭಟನೆ 
ದೇಶ

ಮಹದಾಯಿ ಪ್ರತಿಭಟನೆ: ರಾಜ್ಯಪಾಲರ ಭೇಟಿಗೆ ಅವಕಾಶ ಸಿಗದೇ ಕಾರ್ಯದರ್ಶಿಗೆ ಮನವಿ ಪತ್ರ ನೀಡಿದ ರೈತರು!

ಮಹದಾಯಿ ನದಿ ನೀರು ಹಂಚಿಕೆ ಸಂಬಂಧಿಸಿ ಪ್ರತಿಭಟನಾ ನಿರತ ರೈತರು ಡಿ.27 ರಂದು ರಾಜಭವಕ್ಕೆ ತೆರಳಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಸಂಬಂಧಿಸಿ ಪ್ರತಿಭಟನಾ ನಿರತ ರೈತರು ಡಿ.27 ರಂದು ರಾಜಭವಕ್ಕೆ ತೆರಳಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. 
ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ರೈತರು, ರಾಜ್ಯಪಾಲರು ರಾಜಭವನದಲ್ಲಿಯೇ ಇದ್ದರೂ ಸಹ ಅಪಾಯಿಂಟ್ ಮೆಂಟ್ ಪಡೆದಿಲ್ಲವೆಂಬ ಕಾರಣಕ್ಕೆ ನಮಗೆ ರಾಜ್ಯಪಾಲರನ್ನು ಭೇಟಿ ಮಾಡಲು ಅವಕಾಶ ನೀಡಿಲ್ಲ, ಬದಲಾಗಿ ನಮ್ಮ ಮನವಿ ಪತ್ರವನ್ನು ರಾಜ್ಯಪಾಲರ ಮುಖ್ಯ ಕಾರ್ಯದರ್ಶಿ ಮನವಿ ಪತ್ರವನ್ನು ಸ್ವೀಕರಿಸಿದ್ದಾರೆ. ರಾಜ್ಯಪಾಲರ ಭೇಟಿಗೆ ಅವಕಾಶ ನೀಡದೇ ಇರುವುದಕ್ಕೆ ನಮ್ಮ ಮನಸ್ಸಿಗೆ ನೋವಾಗಿದೆ ಎಂದು ಪ್ರತಿಭಟನಾ ನಿರತ ರೈತ ವಿರೇಶ್ ಸೋಬರದ ಮಠ ಹೇಳಿದ್ದಾರೆ. 
ರಾಜ್ಯಪಾಲರ ಭೇಟಿಗೆ ಅವಕಾಶ ಅವಕಾಶ ನೀಡದೇ ಇದ್ದುದ್ದನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ, ರಾಜ್ಯಪಾಲರು ನಮ್ಮ ಮನವಿಯನ್ನು ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ರೈತರು ಹೇಳಿದ್ದಾರೆ. 
ರಾಜಭವನದಿಂದ ನಿರ್ಗಮಿಸಿರುವ ರೈತರು ಚುನಾವಣಾ ಆಯೋಗಕ್ಕೆ ತೆರಳಿ ಮನವಿ ಸಲ್ಲಿಸಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT