ನಿರ್ಧರಿಸಬೇಕಾದವರು ನಾವೋ, ನೀವೋ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೆ ಕೇಜ್ರಿವಾಲ್ ಪ್ರಶ್ನೆ 
ದೇಶ

ನಿರ್ಧರಿಸಬೇಕಾದವರು ನಾವೋ, ನೀವೋ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೆ ಕೇಜ್ರಿವಾಲ್ ಪ್ರಶ್ನೆ

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಹಾಗೂ ದೆಹಲಿ ಎಎಪಿ ಸರ್ಕಾರದ ನಡುವೆ ಮತ್ತೆ ಜಟಾಪಟಿ ಪ್ರಾರಂಬವಾಗಿದೆ.

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಹಾಗೂ ದೆಹಲಿ ಎಎಪಿ ಸರ್ಕಾರದ ನಡುವೆ ಮತ್ತೆ ಜಟಾಪಟಿ ಪ್ರಾರಂಬವಾಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ "ದೆಹಲಿಯಲ್ಲಿ ಯಾರ ನಿರ್ಧಾರ ಅಂತಿಮ? ಎಂದು ಪ್ರಶ್ನಿಸಿದ್ದಾರೆ. 
"ಲೆಫ್ಟಿನೆಂಟ್ ಗವರ್ನರ್ ಡಿಜಿಟಲೈಸೇಷನ್ ಸಾಕಷ್ಟು ಬೆಳವಣಿಗೆ ಕಂಡಿದೆ ಎಂದು ಹೇಳುತ್ತಾರೆ. ಆದರೆ ದೆಹಲಿ ಸರ್ಕಾರವು ಡಿಜಿಟಲೈಸೇಷನ್ ಇನ್ನೂ ಮನೆ ಮನೆಗೆ ತಲುಪಬೇಕು ಎನ್ನುತ್ತಿದೆ. ಇಲ್ಲಿ ಪ್ರಶ್ನೆ ಎಂದರೆ ಇಲ್ಲಿ ಅಂತಿಮ ನಿರ್ಧಾರ ಯಾರದ್ದು? ಲೆಫ್ಟಿನೆಂಟ್ ಗವರ್ನರ್? ಚುನಾಯಿತ  ಸರ್ಕಾರವೆ?" ಕೇಜ್ರಿವಾಲ್ ಇಂದು ತಮ್ಮ ಟ್ವೀಟ್ ನಲ್ಲಿ ಹೇಳಿದ್ದಾರೆ.
"ಪ್ರಸ್ತುತ ಪ್ರಸ್ತಾಪವನ್ನು ಮರುಪರಿಶೀಲಿಸುವಂತೆ ನಾವು ಸಲಹೆ ನಿಡುತ್ತೇವೆ. ಭ್ರಷ್ಟಾಚಾರವನ್ನು ಕೊನೆಗೊಳಿಸಲು ಮತ್ತು ಸಾರ್ವಜನಿಕ ಸೇವೆ ಸುಧಾರಣೆಗಾಘಿ ಪರ್ಯಾಯ ಮಾದರಿಯನ್ನು ಹುಡುಕಿ" ಎಂದು ಲೆ. ಗವರ್ನರ್ ಹೇಳಿದ್ದಾರೆ.
"ಉತ್ತಮ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಒದಗಿಸಲು ದೆಹಲಿಯ ಸರ್ಕಾರದ ಪ್ರಯತ್ನಗಳಲ್ಲಿ ಭಾರಿ ಹಿನ್ನೆಡೆ ಅನುಭವಿಸಿದೆ ಎನ್ನುವ ಗವರ್ನರ್ ನಿಜ ಪರಿಸ್ಥಿತಿಯ ಅರಿವಿಲ್ಲದೆ ಹೇಳಿಕೆ ನೀಡಿದ್ದಾರೆ." ಎಂದು ಮಂಗಳವಾರ, ದೆಹಲಿಯ ಉಪಮುಖ್ಯಮಂತ್ರಿ ಸಿಸೋಡಿಯಾ ಸಹ ಗವರ್ನರ್ ಹೇಳಿಕೆಯನ್ನು ಖಂಡಿಸಿದ್ದಾರೆ.
ನೀರಿನ ಸಂಪರ್ಕದಿಂದ ವಿವಾಹ ನೊಂದಣಿವರೆಗೆ ಒಟ್ಟು ನಲವತ್ತು ಸೇವೆಗಳನ್ನು ಡಿಜಿಟಲೀಕರಣ ಯೋಜನೆಯಲ್ಲಿ ತರಲು ದೆಹಲಿ ಸರ್ಕಾರವು ತೀರ್ಮಾನಿಸ್ದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT