ದೇಶ

ರಾಜಕೀಯ ಲಾಭಕ್ಕಾಗಿ ಬಿಜೆಪಿಯಿಂದ ಸುಳ್ಳುಗಳ ಸರಮಾಲೆ: ರಾಹುಲ್ ಗಾಂಧಿ

ನಮ್ಮ ದೇಶದ ಅಡಿಪಾಯವಾಗಿರುವ ಸಂವಿಧಾನ ಅಪಾಯದಲ್ಲಿದ್ದು...

ನವದೆಹಲಿ: ನಮ್ಮ ದೇಶದ ಅಡಿಪಾಯವಾಗಿರುವ ಸಂವಿಧಾನ ಅಪಾಯದಲ್ಲಿದ್ದು, ಸಂವಿಧಾನದ ಮೇಲೆ ನೇರ ದಾಳಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ 133ನೇ ಸ್ಥಾಪನಾ ದಿನದ ಅಂಗವಾಗಿ ದೆಹಲಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನದ ವಿರುದ್ಧವಾಗಿ ಬಿಜೆಪಿಯ ಹಿರಿಯ ಸದಸ್ಯರು ಮಾತನಾಡಿರುವುದು ನೋಡಿದರೆ ಬಿಜೆಪಿ ನಿಧಾನವಾಗಿ ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ. ಸಂವಿಧಾನವನ್ನು ರಕ್ಷಿಸುವುದು ಕಾಂಗ್ರೆಸ್ ಪಕ್ಷ ಮತ್ತು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದರು.
ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು,ಇಂದು ನಮ್ಮ ದೇಶದಲ್ಲಿ ನಡೆಯುತ್ತಿರುವ ಘಟನೆ ವ್ಯವಸ್ಥಿತಿ ಸಂಚು. ರಾಜಕೀಯ ಲಾಭಕ್ಕಾಗಿ ಮೂಲ ತತ್ವವನ್ನು ಬಳಸಿಕೊಳ್ಳುವ ಬಿಜೆಪಿ ಸುಳ್ಳಿನ ಸರಮಾಲೆಯನ್ನೇ ಜನರ ಮುಂದಿಡುತ್ತಿದೆ. ಇದುವೇ ಬಿಜೆಪಿಯವರಿಗೆ ಮತ್ತು ನಮಗಿರುವ ವ್ಯತ್ಯಾಸ ಎಂದರು. ನಾವು ಉತ್ತಮವಾಗಿ ಮಾಡದಿರಬಹುದು, ನಾವು ಸೋತಿರಬಹುದು, ಆದರೆ ನಾವು ಸತ್ಯವನ್ನು ಯಾವತ್ತಿಗೂ ಬಿಟ್ಟುಕೊಡುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅಧಿಕಾರ ವಹಿಸಿಕೊಂಡ ನಂತರ ಇದು ಮೊದಲ ಕಾಂಗ್ರೆಸ್ ನ ಸ್ಥಾಪನಾ ದಿನಾಚರಣೆಯಾಗಿದೆ. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಿಹಿತಿಂಡಿ ಹಂಚಲಾಯಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT