ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿರುವ ಆ್ಯಂಬುಲೆನ್ಸ್ 
ದೇಶ

ಮುಂಬೈ ಅಗ್ನಿ ದುರಂತ: ಉಸಿರುಗಟ್ಟಿದ ಪರಿಣಾಮ ಜನರು ಸಾವನ್ನಪ್ಪಿದ್ದಾರೆ-ವೈದ್ಯರು

ವಾಣಿಜ್ಯ ನಗರಿ ಮುಂಬೈನ ಕಮಲಾ ಮಿಲ್ ಕಂಪೌಂಡ್'ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಉಸಿರುಗಟ್ಟಿದ ಪರಿಣಾಮ ಜನರು ಸಾವನ್ನಪ್ಪಿದ್ದಾರೆಂದು ವೈದ್ಯರು ಶುಕ್ರವಾರ ಹೇಳಿದ್ದಾರೆ...

ಮುಂಬೈ: ವಾಣಿಜ್ಯ ನಗರಿ ಮುಂಬೈನ ಕಮಲಾ ಮಿಲ್ ಕಂಪೌಂಡ್'ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಉಸಿರುಗಟ್ಟಿದ ಪರಿಣಾಮ ಜನರು ಸಾವನ್ನಪ್ಪಿದ್ದಾರೆಂದು ವೈದ್ಯರು ಶುಕ್ರವಾರ ಹೇಳಿದ್ದಾರೆ. 
ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ 14 ಮಂದಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿರುವ ಕಿಂಗ್ ಎಡ್ವರ್ಡ್ ಮೆಮೋರಿಯಲ್ ಆಸ್ಪತ್ರೆಯ ವೈದ್ಯ ಡಾ.ರಾಜೇಶ್ ಡೆರೆ ಅವರು ಮಾತನಾಡಿ, ಅಗ್ನಿ ದುರಂತ ಸಂಭವಿಸಿದ ಪರಿಣಾಮ ಉಸಿರುಗಟ್ಟಿ ಜನರು ಸಾವನ್ನಪ್ಪಿದ್ದಾರೆಂದು ಹೇಳಿದ್ದಾರೆ. 
ಮುಂಬೈನ ಕಮಲಾ ಮಿಲ್ ನಲ್ಲಿ ಶುಕ್ರವಾರ ನಸುಕಿನ ವೇಳೆ ತಡರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿತ್ತು. ನಾಲ್ಕು ಮಹಡಿಯ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದ ಪರಿಣಾಮ ಕಟ್ಟಡದಲ್ಲಿದ್ದ 14 ಮಂದಿ ಸಾವನ್ನಪ್ಪಿದ್ದರು. ಅಲ್ಲದೆ 14 ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡ 14 ಮಂದಿಯ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ 
ಕಟ್ಟಡದಲ್ಲಿ ಹಲವು ವಾಣಿಜ್ಯ ಮಳಿಗೆಗಳು, ಹೋಟೆಲ್ ಗಳು ಹಾಗೂ ಕೆಲ ಟಿವಿ ಚಾನೆಲ್ ಗಳ ಟ್ರಾನ್ಸ್ ಮಿಷನ್ ಗಳೂ ಕೂಡ ಇದ್ದವು. ಕಟ್ಟಡಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಚಾನೆಲ್ ಗಳು ಹಾಗೂ ವಾಣಿಜ್ಯ ಮಳಿಗೆಗಳ ಮೇಲೂ ಗಂಭೀರ ಪರಿಣಾಮ ಬೀರಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!