ಖುಷ್ಬೂ ಮೆಹ್ತಾ 
ದೇಶ

ಮುಂಬೈ ಅಗ್ನಿ ದುರಂತ: ಹುಟ್ಟುಹಬ್ಬ ಸಂಭ್ರಮದ ಖುಷಿಯಲ್ಲೇ ಮೃತಪಟ್ಟ ಯುವತಿ

ಮುಂಬೈನ ಲೋವರ್ ಪಾರೆಲ್ ನಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 15 ಮಂದಿ ಮೃತಪಟ್ಟಿದ್ದು ಈ ಪೈಕಿ ತನ್ನ ಹುಟ್ಟುಹಬ್ಬದ...

ಮುಂಬೈ: ಮುಂಬೈನ ಲೋವರ್ ಪಾರೆಲ್ ನಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 15 ಮಂದಿ ಮೃತಪಟ್ಟಿದ್ದು ಈ ಪೈಕಿ ತನ್ನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಯುವತಿಯು ಕೂಡ ಅಸುನೀಗಿರುವುದು ನೋವಿನ ಸಂಗತಿಯಾಗಿದೆ. 
29 ವರ್ಷದ ಖುಷ್ಬೂ ಮೆಹ್ತಾ ನಿನ್ನೆ ರಾತ್ರಿ ಹುಟ್ಟಹಬ್ಬ ಆಚರಿಸಿಕೊಳ್ಳುವ ಸಲುವಾಗಿ ಸ್ನೇಹಿತರನ್ನು ಕರೆದಿದ್ದಳು. ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾಗ ಅಗ್ನಿ ದುರಂತ ಸಂಭವಿಸಿದ್ದು ರೆಸ್ಟೋರೆಂಟ್ ನ ವಾಶ್ ರೂಂನಲ್ಲಿ ಸಿಲುಕಿ ಖುಷ್ಬೂ ಸಾವನ್ನಪ್ಪಿದ್ದಾಳೆ. 
ಕಟ್ಟಡದ ಕಮಲ ಮಿಲ್ಸ್ ನ ರೆಸ್ಟೋರೆಂಟ್ ನಲ್ಲಿ ಮಧ್ಯರಾತ್ರಿ ಈ ಅಗ್ನಿ ದುರಂತ ಸಂಭವಿಸಿತ್ತು. ಇದುವರೆಗೂ ಉಸಿರುಗಟ್ಟಿ 15 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ 11 ಮಂದಿ ಮಹಿಳೆಯರು ಸೇರಿದ್ದಾರೆ. ಇನ್ನು 19 ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT