ಖುಷ್ಬೂ ಮೆಹ್ತಾ 
ದೇಶ

ಮುಂಬೈ ಅಗ್ನಿ ದುರಂತ: ಹುಟ್ಟುಹಬ್ಬ ಸಂಭ್ರಮದ ಖುಷಿಯಲ್ಲೇ ಮೃತಪಟ್ಟ ಯುವತಿ

ಮುಂಬೈನ ಲೋವರ್ ಪಾರೆಲ್ ನಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 15 ಮಂದಿ ಮೃತಪಟ್ಟಿದ್ದು ಈ ಪೈಕಿ ತನ್ನ ಹುಟ್ಟುಹಬ್ಬದ...

ಮುಂಬೈ: ಮುಂಬೈನ ಲೋವರ್ ಪಾರೆಲ್ ನಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 15 ಮಂದಿ ಮೃತಪಟ್ಟಿದ್ದು ಈ ಪೈಕಿ ತನ್ನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಯುವತಿಯು ಕೂಡ ಅಸುನೀಗಿರುವುದು ನೋವಿನ ಸಂಗತಿಯಾಗಿದೆ. 
29 ವರ್ಷದ ಖುಷ್ಬೂ ಮೆಹ್ತಾ ನಿನ್ನೆ ರಾತ್ರಿ ಹುಟ್ಟಹಬ್ಬ ಆಚರಿಸಿಕೊಳ್ಳುವ ಸಲುವಾಗಿ ಸ್ನೇಹಿತರನ್ನು ಕರೆದಿದ್ದಳು. ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾಗ ಅಗ್ನಿ ದುರಂತ ಸಂಭವಿಸಿದ್ದು ರೆಸ್ಟೋರೆಂಟ್ ನ ವಾಶ್ ರೂಂನಲ್ಲಿ ಸಿಲುಕಿ ಖುಷ್ಬೂ ಸಾವನ್ನಪ್ಪಿದ್ದಾಳೆ. 
ಕಟ್ಟಡದ ಕಮಲ ಮಿಲ್ಸ್ ನ ರೆಸ್ಟೋರೆಂಟ್ ನಲ್ಲಿ ಮಧ್ಯರಾತ್ರಿ ಈ ಅಗ್ನಿ ದುರಂತ ಸಂಭವಿಸಿತ್ತು. ಇದುವರೆಗೂ ಉಸಿರುಗಟ್ಟಿ 15 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ 11 ಮಂದಿ ಮಹಿಳೆಯರು ಸೇರಿದ್ದಾರೆ. ಇನ್ನು 19 ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT