ಯೋಧ ತೇಜ್ ಬಹದ್ದೂರ್ ಯಾದವ್ 
ದೇಶ

ಕಳಪೆ ಆಹಾರ ವಿಡಿಯೋ ಪ್ರಕರಣ: ಬಿಎಸ್ ಎಫ್ ಯೋಧ ತೇಜ್ ಬಹದ್ದೂರ್ ಬಂಧನ?

ಸೈನಿಕರಿಗೆ ಕಳಪೆ ಮಟ್ಟದ ಆಹಾರ ನೀಡಲಾಗುತ್ತಿದೆ ಎಂಬ ವಿಡಿಯೋ ಮಾಡಿ ಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದ ಬಿಎಸ್​ಎಫ್ ಯೋಧ ತೇಜ್ ಬಹದ್ದೂರ್ ಯಾದವ್...

ನವದೆಹಲಿ: ಸೈನಿಕರಿಗೆ ಕಳಪೆ ಮಟ್ಟದ ಆಹಾರ ನೀಡಲಾಗುತ್ತಿದೆ ಎಂಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದ ಬಿಎಸ್​ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಅವರನ್ನು ಬಂಧಿಸಲಾಗಿದೆ ಎಂದು ಅವರ ಪತ್ನಿ ಆರೋಪಿಸಿದ್ದಾರೆ.

ನನ್ನ ಪತಿ ಜನವರಿ 31 ರಂದು ಮನೆಗೆ ಬರಬೇಕಿತ್ತು, ಆದರೆ ಇದುವರೆಗೂ ಬಂದಿಲ್ಲ ಎಂದು ಯಾದವ್ ಪತ್ನಿ ಶರ್ಮಿಳಾ ದೂರಿದ್ದಾರೆ. ನನ್ನ ಪತಿಗೆ ನಿವೃತ್ತಿಯಾಗುವಂತೆ ಒತ್ತಡ ಹೇರಲಾಗುತ್ತಿದೆ. ಅಲ್ಲದೆ ಅವರನ್ನು ಬಂಧನದಲ್ಲಿಡಲಾಗಿದೆ ಎಂದು ಅವರು ಆಪಾದಿಸಿದ್ದಾರೆ.

ಬಿಎಸ್ ಎಫ್ ನ 29ನೇ ಬೆಟಾಲಿಯನ್ ನಲ್ಲಿ ನನ್ನ ಪತಿ ಕೆಲಸ ಮಾಡುತ್ತಿದ್ದರು. ಇಂದು ನನಗೆ ಬೇರೊಬ್ಬರ ಫೋನಿನಿಂದ ಕೆರ ಮಾಡಿ ನನ್ನನ್ನು ಬಂಧಿಸಲಾಗಿದೆ, ನನಗೆ ಮಾನಸಿಕವಾಗಿ ಕಿರುಕುಳ ನೀಡಿ ಬೆದರಿಕೆ ಹಾಕಲಾಗುತ್ತಿದೆ ಎಂದು ತೇಜ್ ಬಹದ್ದೂರ್ ಹೇಳಿದ್ದಾಗಿ ಶರ್ಮಿಳಾ ಯಾದವ್ ತಿಳಿಸಿದ್ದಾರೆ.

ಮೊದಲು ಕರೆ ಮಾಡಿ ನನ್ನನ್ನು ನಿವೃತ್ತಿಯಾಗುವಂತೆ ಬಲವಂತ ಮಾಡಲಾಗುತ್ತಿದೆ ಎಂದು ಹೇಳಿದ್ದರು. ಮತ್ತೆ 1 ಗಂಟೆ ನಂತರ ನಿವೃತ್ತಿಯನ್ನು ರದ್ದು ಮಾಡಿ ಅವರನ್ನು ಬಂಧಿಸಿದ್ದಾರೆ ಎಂದು ಶರ್ಮಿಳಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ತೇಜ್ ಬಹದ್ದೂರ್ ಅವರನ್ನು ಬಂಧಿಸಿಲ್ಲ, ಅವರು ಮಾಡಿರುವ ಆಪಾದನೆಗಳ ಕುರಿತು ವಿಚಾರಣೆ ಪ್ರಗತಿಯಲ್ಲಿದೆ. ಅದು ಮುಗಿಯುವವರೆಗು ಅವರನ್ನು ಒಳಗೊಂಡಂತೆ ಈ ಸಂಬಂಧ ವಿಚರಾಣೆ ಎದುರಿಸುತ್ತಿರುವ ಯಾರೊಬ್ಬರು ನಿವೃತ್ತಿ ಹೊಂದುವಂತಿಲ್ಲ. ಅಲ್ಲದೆ ಅವರ ವಿರುದ್ಧ ಕೆಲವು ಶಿಸ್ತು ಉಲ್ಲಂಘನೆ ದೂರುಗಳು ಇವೆ ಎಂದು ಬಿಎಸ್ ಎಫ್ ಅಧಿಕಾರಿಗಳು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT