ಯೋಧ ತೇಜ್ ಬಹದ್ದೂರ್ ಯಾದವ್ 
ದೇಶ

ಕಳಪೆ ಆಹಾರ ವಿಡಿಯೋ ಪ್ರಕರಣ: ಬಿಎಸ್ ಎಫ್ ಯೋಧ ತೇಜ್ ಬಹದ್ದೂರ್ ಬಂಧನ?

ಸೈನಿಕರಿಗೆ ಕಳಪೆ ಮಟ್ಟದ ಆಹಾರ ನೀಡಲಾಗುತ್ತಿದೆ ಎಂಬ ವಿಡಿಯೋ ಮಾಡಿ ಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದ ಬಿಎಸ್​ಎಫ್ ಯೋಧ ತೇಜ್ ಬಹದ್ದೂರ್ ಯಾದವ್...

ನವದೆಹಲಿ: ಸೈನಿಕರಿಗೆ ಕಳಪೆ ಮಟ್ಟದ ಆಹಾರ ನೀಡಲಾಗುತ್ತಿದೆ ಎಂಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದ ಬಿಎಸ್​ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಅವರನ್ನು ಬಂಧಿಸಲಾಗಿದೆ ಎಂದು ಅವರ ಪತ್ನಿ ಆರೋಪಿಸಿದ್ದಾರೆ.

ನನ್ನ ಪತಿ ಜನವರಿ 31 ರಂದು ಮನೆಗೆ ಬರಬೇಕಿತ್ತು, ಆದರೆ ಇದುವರೆಗೂ ಬಂದಿಲ್ಲ ಎಂದು ಯಾದವ್ ಪತ್ನಿ ಶರ್ಮಿಳಾ ದೂರಿದ್ದಾರೆ. ನನ್ನ ಪತಿಗೆ ನಿವೃತ್ತಿಯಾಗುವಂತೆ ಒತ್ತಡ ಹೇರಲಾಗುತ್ತಿದೆ. ಅಲ್ಲದೆ ಅವರನ್ನು ಬಂಧನದಲ್ಲಿಡಲಾಗಿದೆ ಎಂದು ಅವರು ಆಪಾದಿಸಿದ್ದಾರೆ.

ಬಿಎಸ್ ಎಫ್ ನ 29ನೇ ಬೆಟಾಲಿಯನ್ ನಲ್ಲಿ ನನ್ನ ಪತಿ ಕೆಲಸ ಮಾಡುತ್ತಿದ್ದರು. ಇಂದು ನನಗೆ ಬೇರೊಬ್ಬರ ಫೋನಿನಿಂದ ಕೆರ ಮಾಡಿ ನನ್ನನ್ನು ಬಂಧಿಸಲಾಗಿದೆ, ನನಗೆ ಮಾನಸಿಕವಾಗಿ ಕಿರುಕುಳ ನೀಡಿ ಬೆದರಿಕೆ ಹಾಕಲಾಗುತ್ತಿದೆ ಎಂದು ತೇಜ್ ಬಹದ್ದೂರ್ ಹೇಳಿದ್ದಾಗಿ ಶರ್ಮಿಳಾ ಯಾದವ್ ತಿಳಿಸಿದ್ದಾರೆ.

ಮೊದಲು ಕರೆ ಮಾಡಿ ನನ್ನನ್ನು ನಿವೃತ್ತಿಯಾಗುವಂತೆ ಬಲವಂತ ಮಾಡಲಾಗುತ್ತಿದೆ ಎಂದು ಹೇಳಿದ್ದರು. ಮತ್ತೆ 1 ಗಂಟೆ ನಂತರ ನಿವೃತ್ತಿಯನ್ನು ರದ್ದು ಮಾಡಿ ಅವರನ್ನು ಬಂಧಿಸಿದ್ದಾರೆ ಎಂದು ಶರ್ಮಿಳಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ತೇಜ್ ಬಹದ್ದೂರ್ ಅವರನ್ನು ಬಂಧಿಸಿಲ್ಲ, ಅವರು ಮಾಡಿರುವ ಆಪಾದನೆಗಳ ಕುರಿತು ವಿಚಾರಣೆ ಪ್ರಗತಿಯಲ್ಲಿದೆ. ಅದು ಮುಗಿಯುವವರೆಗು ಅವರನ್ನು ಒಳಗೊಂಡಂತೆ ಈ ಸಂಬಂಧ ವಿಚರಾಣೆ ಎದುರಿಸುತ್ತಿರುವ ಯಾರೊಬ್ಬರು ನಿವೃತ್ತಿ ಹೊಂದುವಂತಿಲ್ಲ. ಅಲ್ಲದೆ ಅವರ ವಿರುದ್ಧ ಕೆಲವು ಶಿಸ್ತು ಉಲ್ಲಂಘನೆ ದೂರುಗಳು ಇವೆ ಎಂದು ಬಿಎಸ್ ಎಫ್ ಅಧಿಕಾರಿಗಳು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT