ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್, ಗೋವಾ ಚುನಾವಣೆ: ಫೆ.3, 4ರಂದು ಮಾಧ್ಯಮಗಳಲ್ಲಿ ರಾಜಕೀಯ ಜಾಹೀರಾತು ಪ್ರಕಟಕ್ಕೆ ನಿರ್ಬಂಧ

ಮುಂಬರುವ ಐದು ವಿಧಾನಸಭಾ ಕ್ಷೇತ್ರಗಳ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಯಾವುದೇ...

ನವದೆಹಲಿ:  ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ಸಂಘಟನೆಗಳು ಅಥವಾ ವ್ಯಕ್ತಿ ಫೆಬ್ರವರಿ 3 ಮತ್ತು 4ರಂದು ಮುದ್ರಣ ಮಾಧ್ಯಮದಲ್ಲಿ ಜಾಹೀರಾತುಗಳನ್ನು ಪ್ರಕಟಿಸಬಾರದೆಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. ಮಾಧ್ಯಮ ಪ್ರಮಾಣೀಕರಣ ಮತ್ತು ಉಸ್ತುವಾರಿ ಸಮಿತಿ(ಎಂಸಿಎಂಸಿ)ಯಿಂದ ಪೂರ್ವ ಪ್ರಮಾಣಿತ ಪಡೆದ ಜಾಹೀರಾತುಗಳನ್ನು ಮಾತ್ರ ಪ್ರಕಟಿಸಬಹುದೆಂದು ಹೇಳಿದೆ.
ಈ ಹಿಂದೆ ಇಂತಹ ಅನೇಕ ಜಾಹೀರಾತುಗಳು ಜನರನ್ನು ತಪ್ಪು ದಾರಿಗೆಳೆಯುವುದು ಚುನಾವಣಾ ಆಯೋಗದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ ಆದೇಶ ನೀಡಿದೆ.
ಆಯೋಗ ಗೋವಾ ಮತ್ತು ಪಂಜಾಬ್ ನ ಎಲ್ಲಾ ಪತ್ರಿಕೆಗಳಿಗೂ ಇಂತಹದೇ ಆದೇಶ ಹೊರಡಿಸಿ, ಮಾಧ್ಯಮ ಪ್ರಮಾಣೀಕರಣ ಮತ್ತು ಉಸ್ತುವಾರಿ ಸಮಿತಿಯಿಂದ ಪೂರ್ವ ಪ್ರಮಾಣಿತ ಪಡೆಯದ ಯಾವುದೇ ಜಾಹೀರಾತುಗಳನ್ನು ಫೆಬ್ರವರಿ 3 ಮತ್ತು 4ರಂದು ಪ್ರಕಟಿಸದಂತೆ ಹೇಳಿದೆ.
ಪೂರ್ವ ಪ್ರಮಾಣಿತ ಪಡೆದುಕೊಳ್ಳಬಯಸುವ ಜಾಹೀರಾತುಗಳನ್ನು ಪರೀಕ್ಷಿಸಿ ಅನುಮತಿ ನೀಡಬೇಕೆಂದು ಕೂಡ ಚುನಾವಣಾ ಆಯೋಗ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT