ಸ್ಫೋಟ ಸಂಭವಿಸಿದ ಸ್ಥಳ 
ದೇಶ

ಒಡಿಶಾ: ನೆಲಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಪೊಲೀಸರ ಸಂಖ್ಯೆ 8ಕ್ಕೆ ಏರಿಕೆ

ಒಡಿಶಾದ ಕೋರಪುಟ್ ಜಿಲ್ಲೆಯ ಸುಂಕಿಯಲ್ಲಿ ಶಂಕಿತ ನಕ್ಸಲರು ನಿನ್ನೆ ನೆಲಬಾಂಬ್...

ಕೊರಪುಟ್ (ಒಡಿಶಾ): ಒಡಿಶಾದ ಕೋರಪುಟ್ ಜಿಲ್ಲೆಯ ಸುಂಕಿಯಲ್ಲಿ ಶಂಕಿತ ನಕ್ಸಲರು ನಿನ್ನೆ ನೆಲಬಾಂಬ್ ಸ್ಫೋಟಿಸಿದ್ದರಿಂದ ಮಡಿದ ಪೊಲೀಸ್ ಸಿಬ್ಬಂದಿ  ಸಂಖ್ಯೆ ಗುರುವಾರ 8ಕ್ಕೇರಿದ್ದು  5ಮಂದಿ ಗಾಯಗೊಂಡಿದ್ದಾರೆ.  
ಈ ಘಟನೆ ನಿನ್ನೆ ಸಂಜೆ ನಡೆದಿದ್ದು, ಒಡಿಶಾ ರಾಜ್ಯ ಸೇನಾ ಪೊಲೀಸ್ ಇಲಾಖೆಯ 13 ಸಿಬ್ಬಂದಿಯನ್ನು ಹೊತ್ತು ಸಾಗುತ್ತಿದ್ದ ವ್ಯಾನ್ ಮಾವೋವಾದಿಗಳು ನೆಲಬಾಂಬ್ ಇಟ್ಟಿದ್ದರಿಂದ ಗುಡ್ಡಗಾಡಿನ ರಸ್ತೆಯಲ್ಲಿ ಸ್ಫೋಟಗೊಂಡಿತು.
ಈ ಸ್ಫೋಟ, ಜಗದಲ್ಪುರ್-ವಿಶಾಖಪಟ್ನಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೊರಪುಟ್ ಜಿಲ್ಲೆಯ ಸುಂಕಿಯಿಂದ 2 ಕಿಲೋ ಮೀಟರ್ ದೂರದಲ್ಲಿ ನಡೆದಿದೆ. 
ಗಾಯಗೊಂಡವರನ್ನು ಕೊರಪುಟ್ ಮತ್ತು ವಿಶಾಖಪಟ್ನಂನ ಸರ್ಕಾರಿ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಈ ಘಟನೆಗೆ ಇದು ಹೇಡಿಗಳ ಕೃತ್ಯ ಎಂದು ಬಣ್ಣಿಸಿದ್ದಾರೆ.
ಇದು ಮಾವೋವಾದಿಗಳ ಕೃತ್ಯವಿರಬಹುದೆಂದು ಬಲವಾಗಿ ಶಂಕಿಸಲಾಗಿದ್ದು,  ಕೇಸು ದಾಖಲಿಸುತ್ತೇವೆ ಎಂದು ಒಡಿಶಾ ಪೊಲೀಸ್ ಮಹಾ ನಿರ್ದೇಶಕ ಕೆ.ಬಿ.ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT