ಹಸ್ಮುಖ್ ಅದಿಯಾ 
ದೇಶ

ತೆರಿಗೆ ವಿನಾಯ್ತಿ ಬೇಕೆಂದರೆ ಡಿಸೆಂಬರ್ ಒಳಗೆ ರಿಟರ್ನ್ಸ್ ಫೈಲ್ ಮಾಡಿ: ರಾಜಕೀಯ ಪಕ್ಷಗಳಿಗೆ ಸರ್ಕಾರ ಸೂಚನೆ

ರಾಜಕೀಯ ಪಕ್ಷಗಳು ಪ್ರತಿ ವರ್ಷ ಡಿಸೆಂಬರ್ ಒಳಗೆ ಆಡಿಟ್ ರಿಟರ್ನ್ ಫೈಲ್ ಮಾಡದಿದ್ದರೇ ತೆರಿಗೆ ವಿನಾಯಿತಿಯಿಂದ ವಂಚಿತವಾಗುವ ಸಾಧ್ಯತೆಗಳಿವೆ ಎಂದು...

ನವದೆಹಲಿ: ರಾಜಕೀಯ ಪಕ್ಷಗಳು ಪ್ರತಿ ವರ್ಷ ಡಿಸೆಂಬರ್ ಒಳಗೆ ಆಡಿಟ್ ರಿಟರ್ನ್  ಫೈಲ್ ಮಾಡದಿದ್ದರೇ  ತೆರಿಗೆ ವಿನಾಯಿತಿಯಿಂದ ವಂಚಿತವಾಗುವ ಸಾಧ್ಯತೆಗಳಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ರಾಜಕೀಯ ಪಕ್ಷಗಳಿಗೆ ಬರುವ ದೇಣಿಗೆಯಲ್ಲಿ ಹಣ ನೀಡುವವರ ವಿಳಾಸವನ್ನು ರಹಸ್ಯವಾಗಿ ಇಡಲಾಗುವುದು ಎಂದು ಕೇಂದ್ರ ಕಂದಾಯ ಇಲಾಖೆ ಕಾರ್ಯದರ್ಶಿ ಹಸ್ಮುಖ್ ಅದಿಯಾ ಹೇಳಿದ್ದಾರೆ.

ಹಣಕಾಸು ಮಸೂದೆಗೆ ತಿದ್ದುಪಡಿ ತರುವ ಮೂಲಕ ದೇಣಿಗೆ ನೀಡುವವರ ಹೆಸರು ಗೌಪ್ಯವಾಗಿಡಲಾಗುವುದು ಎಂದು ಅವರು ವಿವರಿಸಿದ್ದಾರೆ.

ನಿನ್ನೆ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ವೇಳೆ ರಾಜಕೀಯ ಪಕ್ಷಗಳು 2 ಸಾವಿರ ರು ಗಿಂತ ಹೆಚ್ಚಿನ ಹಣವನ್ನು ನಗದು ರೂಪದಲ್ಲಿ ಸ್ವೀಕರಿಸುವಂತಿಲ್ಲ ಎಂದು ನಿಯಮ ದಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ದೇಣಿಗೆ ದಾರರು ನೀಡುವ ಹಣವನ್ನು ಚೆಕ್ ಅಥವಾ ಡಿಜಿಟಲ್ ಮಾದರಿಯಲ್ಲಿ ಪಡೆಯಬಹುದಾಗಿದೆ.

ಇಲ್ಲಿಯವರೆಗೆ ರಾಜಕೀಯ ಪಕ್ಷಗಳು 20 ಸಾವಿರ ರು ವರೆಗೂ ದೇಣಿಗೆ  ನಗದು ಹಣವನ್ನು ಸ್ವೀಕರಿಸಬಹುದಿತ್ತು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತಿದ್ದುಡಿ  ನಿಯಮದ ಪ್ರಕಾರ ದೇಣಿಗೆ ನೀಡುವವರು ಚುನಾವಣಾ ಬಾಂಡ್ ಖರೀದಿಸಬಹುದಾಗಿದೆ. ದೇಣಿಗೆದಾರರು ಮಾನ್ಯತೆ ಪಡೆದ ಬ್ಯಾಂಕ್ ಗಳಲ್ಲಿ ಚುನಾವಣಾ ಬಾಂಡ್ ಖರೀದಿಸಲು ಚೆಕ್ ಅಥವಾ ಡಿಜಿಟಲ್ ಪೇಮೆಂಟ್ ಮೂಲಕ ಮಾಡಬಹುದಾಗಿದೆ.

ಸರ್ಕಾರ ನಿಗದಿ ಪಡಿಸಿರುವ ಸಮಯದೊಳಗೆ ರಾಜಕೀಯ ಪಕ್ಷಗಳು ಆಡಿಟ್ ರಿಟರ್ನ್ ಫೈಲ್ ಮಾಡಬೇಕು ಇಲ್ಲದಿದ್ದರೇ ತೆರಿಗೆ ವಿನಾಯಿತಿಯಿಂದ ವಂಚತರಾಗುತ್ತಾರೆ ಎಂದು ಹಣಕಾಸು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT