ವಿಜಯ್ ಮಲ್ಯ 
ದೇಶ

ನನ್ನನ್ನು ಫುಟ್ ಬಾಲ್ ನಂತೆ ಎರಡು ತಂಡಗಳು ಒದೆಯುತ್ತಿವೆ: ವಿಜಯ್ ಮಲ್ಯ

ಮದ್ಯ ದೊರೆ ವಿಜಯ್ ಮಲ್ಯ ಅವರು ದೇಶ ಬಿಟ್ಟು ಹೋಗದಂತೆ ತಡೆಯಲು ಸರ್ಕಾರ ಒಂದೆಡೆ ಕಾನೂನು...

ನವದೆಹಲಿ: ಮದ್ಯ ದೊರೆ ವಿಜಯ್ ಮಲ್ಯ ಅವರು ದೇಶ ಬಿಟ್ಟು ಹೋಗದಂತೆ ತಡೆಯಲು ಸರ್ಕಾರ ಒಂದೆಡೆ ಕಾನೂನು ರಚಿಸಲು ಯೋಚಿಸುತ್ತಿದ್ದರೆ, ಎನ್ ಡಿಎ ಮತ್ತು ಯುಪಿಎ ಎಂಬ ಎರಡು ಸ್ಪರ್ಧಾತ್ಮಕ ತಂಡಗಳು ನನ್ನನ್ನು ಫುಟ್ ಬಾಲ್ ರೀತಿ ಒದೆಯುತ್ತಿವೆ ಎಂದು ವಿಜಯ್ ಮಲ್ಯ ಹೇಳಿದ್ದಾರೆ.
ಸಿಬಿಐ ನಡೆಸುತ್ತಿರುವ ತನಿಖೆ ಮತ್ತು ಇಂಗ್ಲೆಂಡ್ ನಿಂದ ಹೊರಗೋಡಿಸಲು ನಡೆಯುತ್ತಿರುವ ಪ್ರಯತ್ನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಮಾಧ್ಯಮವನ್ನು ತಮ್ಮ ವಿರುದ್ಧ ಬಳಸಲಾಗುತ್ತಿದೆ ಎಂದರು.
ಮಾಧ್ಯಮವನ್ನು ಸಂತೋಷವಾಗಿ ಪಿಚ್ ಆಗಿ ಬಳಸಿಕೊಳ್ಳಲಾಗುತ್ತಿದೆ. ನಾನಿಲ್ಲಿ ಫುಟ್ ಬಾಲ್. ಎರಡು ಸ್ಪರ್ಧಾತ್ಮಕ ತಂಡಗಳಾದ ಎನ್ ಡಿಎ ಮತ್ತು ಯುಪಿಎಗಳು ಆಡುತ್ತಿವೆ. ದುರದೃಷ್ಟವಶಾತ್ ಯಾವುದೇ ತೀರ್ಪುಗಾರರಿಲ್ಲ ಎಂದು ಮಲ್ಯ ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ.
ಮೊನ್ನೆ ಮಂಡಿಸಿದ ಬಜೆಟ್ ನಲ್ಲಿ ಅರುಣ್ ಜೇಟ್ಲಿಯವರು, ಇಂತಹ ಸಾಲ ಬಾಕಿಯಿಟ್ಟಿರುವವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವವರೆಗೆ ಅವರ ಆಸ್ತಿಪಾಸ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ಹೇಳಿದ್ದರು. ಇತ್ತೀಚೆಗೆ ಭಾರೀ ಮೊತ್ತದ ಸಾಲವನ್ನು ಪಾವತಿಸದೆ ದೇಶ ಬಿಟ್ಟು ಹೋದವರು ಇದ್ದಾರೆ. ಕಾನೂನಿನ ಕೈಯಲ್ಲಿ ಶಿಕ್ಷೆಯನ್ನು ತಪ್ಪಿಸಲು ಹೀಗೆ ಮಾಡುತ್ತಿದ್ದಾರೆ. ಇವರಿಗೆ ಕಾನೂನಿನಡಿಯಲ್ಲಿ ಶಿಕ್ಷೆ ನೀಡಲಾಗುವುದು ಎಂದು ಜೇಟ್ಲಿ ಹೇಳಿದ್ದರು.  
ಕೇವಲ ಸರ್ಕಾರಕ್ಕೆ ಮಾತ್ರವಲ್ಲದೆ ಸಿಬಿಐ ಕೂಡ ತಮ್ಮ  ವಿರುದ್ಧ  ತಪ್ಪಾಗಿ ಆರೋಪಗಳನ್ನು ಮಾಡುತ್ತಿದೆ. ಪೊಲೀಸರ ತಂಡಕ್ಕೆ ಉದ್ಯಮ ಮತ್ತು ದೇಶದ ಆರ್ಥಿಕತೆಯ ಬಗ್ಗೆ ಏನು ತಿಳಿದಿದೆ ಎಂದು ಮಲ್ಯ ಪ್ರಶ್ನಿಸಿದ್ದಾರೆ.
ಐಡಿಬಿಐ ಬ್ಯಾಂಕಿನಿಂದ ಪಡೆದುಕೊಂಡ 720 ಕೋಟಿ ರೂಪಾಯಿ ಸಾಲವನ್ನು ಹಿಂತಿರುಗಿಸದ್ದಕ್ಕೆ ಸಿಬಿಐ ಮಲ್ಯ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು ಇಂಗ್ಲೆಂಡಿನಿಂದ ಗಡೀಪಾರನ್ನು ಬಯಸುತ್ತಿದೆ.
ಕಿಂಗ್ ಫಿಶರ್ ಏರ್ ಲೈನ್ಸ್ ಗೆ ವಿವಿಧ ಬ್ಯಾಂಕ್ ಗಳಿಂದ 9,000 ಕೋಟಿ ರೂಪಾಯಿ ಸಾಲ ಪಡೆದುಕೊಂಡು ಮರುಪಾವತಿಸದೆ ಕಳೆದ ಮಾರ್ಚ್ 2ರಂದು ವಿಜಯ್ ಮಲ್ಯ ಭಾರತ ತೊರೆದು ಇಂಗ್ಲೆಂಡಿನಲ್ಲಿ ನೆಲೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT