ವಿಕೆ ಶಶಿಕಲಾ 
ದೇಶ

ವಿಕೆ ಶಶಿಕಲಾ ವಿರುದ್ಧ ದೂರಿನ ಬಗ್ಗೆ ಎಐಎಡಿಎಂಕೆ ಬಳಿ ಪ್ರತಿಕ್ರಿಯೆ ಕೇಳಿದ ಚುನಾವಣಾ ಆಯೋಗ

ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ವಿ.ಕೆ.ಶಶಿಕಲಾ ಅವರ ನೇಮಕಾತಿಗೆ...

ನವದೆಹಲಿ: ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ವಿ.ಕೆ.ಶಶಿಕಲಾ ಅವರ ನೇಮಕಾತಿಗೆ ಸಂಬಂಧಪಟ್ಟಂತೆ ನಡೆದ ಚುನಾವಣೆ ಖಂಡಿಸಿ ಪಕ್ಷದಿಂದ ವಜಾಗೊಂಡ ನಾಯಕಿ ಶಶಿಕಲಾ ಪುಷ್ಪ ಅವರು ದಾಖಲಿಸಿದ್ದ ದೂರಿಗೆ ಸಂಬಂಧಪಟ್ಟಂತೆ ಚುನಾವಣಾ ಆಯೋಗ ಎಐಎಡಿಎಂಕೆಯ ಪ್ರತಿಕ್ರಿಯೆ ಕೇಳಿದೆ.
ಕ್ರಮಬದ್ಧವಾಗಿ ಚುನಾವಣೆಯನ್ನು ನಡೆಸಲಿಲ್ಲ ಎಂದು ಶಶಿಕಲಾ ಪುಷ್ಪ ದೂರು ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಈ ಬಗ್ಗೆ ಪಕ್ಷದಿಂದ ಪ್ರತಿಕ್ರಿಯೆ ಕೇಳಲಾಗಿದೆ. ನೊಟೀಸ್ ಜಾರಿಯಲ್ಲದ್ದರಿಂದ ಕಾಲಾವಧಿ ನಿಗದಿಪಡಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಶಶಿಕಲಾ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಪ್ರಜಾಪ್ರಭುತ್ವವಲ್ಲದ ರೀತಿಯಲ್ಲಿ ನಡೆಸಲಾಗಿದೆ ಎಂದು ಶಶಿಕಲಾ ಪುಷ್ಪ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ವಿ.ಕೆ.ಶಶಿಕಲಾ 1980ರಿಂದ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಅತ್ಯಂತ ನಿಕಟವರ್ತಿಯಾಗಿದ್ದರು. ಜಯಲಲಿತಾ ಅವರ ನಿಧನಕ್ಕೆ ಮುನ್ನ ಯಾವುದೇ ಸ್ಥಾನವನ್ನು ಅಧಿಕೃತವಾಗಿ ಹೊಂದಿಲ್ಲದಿದ್ದರೂ ಪಕ್ಷದ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT