ವಿಕೆ ಶಶಿಕಲಾ 
ದೇಶ

ವಿಕೆ ಶಶಿಕಲಾ ವಿರುದ್ಧ ದೂರಿನ ಬಗ್ಗೆ ಎಐಎಡಿಎಂಕೆ ಬಳಿ ಪ್ರತಿಕ್ರಿಯೆ ಕೇಳಿದ ಚುನಾವಣಾ ಆಯೋಗ

ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ವಿ.ಕೆ.ಶಶಿಕಲಾ ಅವರ ನೇಮಕಾತಿಗೆ...

ನವದೆಹಲಿ: ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ವಿ.ಕೆ.ಶಶಿಕಲಾ ಅವರ ನೇಮಕಾತಿಗೆ ಸಂಬಂಧಪಟ್ಟಂತೆ ನಡೆದ ಚುನಾವಣೆ ಖಂಡಿಸಿ ಪಕ್ಷದಿಂದ ವಜಾಗೊಂಡ ನಾಯಕಿ ಶಶಿಕಲಾ ಪುಷ್ಪ ಅವರು ದಾಖಲಿಸಿದ್ದ ದೂರಿಗೆ ಸಂಬಂಧಪಟ್ಟಂತೆ ಚುನಾವಣಾ ಆಯೋಗ ಎಐಎಡಿಎಂಕೆಯ ಪ್ರತಿಕ್ರಿಯೆ ಕೇಳಿದೆ.
ಕ್ರಮಬದ್ಧವಾಗಿ ಚುನಾವಣೆಯನ್ನು ನಡೆಸಲಿಲ್ಲ ಎಂದು ಶಶಿಕಲಾ ಪುಷ್ಪ ದೂರು ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಈ ಬಗ್ಗೆ ಪಕ್ಷದಿಂದ ಪ್ರತಿಕ್ರಿಯೆ ಕೇಳಲಾಗಿದೆ. ನೊಟೀಸ್ ಜಾರಿಯಲ್ಲದ್ದರಿಂದ ಕಾಲಾವಧಿ ನಿಗದಿಪಡಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಶಶಿಕಲಾ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಪ್ರಜಾಪ್ರಭುತ್ವವಲ್ಲದ ರೀತಿಯಲ್ಲಿ ನಡೆಸಲಾಗಿದೆ ಎಂದು ಶಶಿಕಲಾ ಪುಷ್ಪ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ವಿ.ಕೆ.ಶಶಿಕಲಾ 1980ರಿಂದ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಅತ್ಯಂತ ನಿಕಟವರ್ತಿಯಾಗಿದ್ದರು. ಜಯಲಲಿತಾ ಅವರ ನಿಧನಕ್ಕೆ ಮುನ್ನ ಯಾವುದೇ ಸ್ಥಾನವನ್ನು ಅಧಿಕೃತವಾಗಿ ಹೊಂದಿಲ್ಲದಿದ್ದರೂ ಪಕ್ಷದ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT