ಗೌರವ್ ಭಾಟಿಯಾ 
ದೇಶ

ಮತದಾನಕ್ಕೆ 5 ದಿನ ಬಾಕಿ ಇರುವಂತೆ ಸಮಾಜವಾದಿ ಪಕ್ಷ ತೊರೆದ ಗೌರವ್ ಭಾಟಿಯಾ

ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಮತದಾನಕ್ಕೆ ಇನ್ನು ಐದು ದಿನಗಳು ಬಾಕಿ ಇರುವಂತೆ ಸಮಾಜವಾದಿ ಪಕ್ಷದ ಎಲ್ಲಾ ಸ್ಥಾನಗಳಿಗೂ ಗೌರವ್ ಭಾಟಿಯಾ...

ನವದೆಹಲಿ: ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಮತದಾನಕ್ಕೆ ಇನ್ನು ಐದು ದಿನಗಳು ಬಾಕಿ ಇರುವಂತೆ ಸಮಾಜವಾದಿ ಪಕ್ಷದ ಎಲ್ಲಾ ಸ್ಥಾನಗಳಿಗೂ ಗೌರವ್ ಭಾಟಿಯಾ ರಾಜಿನಾಮೆ ನೀಡಿದ್ದಾರೆ.

ರಾಷ್ಟ್ರೀಯ ಅಧ್ಯಕ್ಷ ಕಾನೂನು ವಿಂಗ್ ಸೇರಿದಂತೆ ಸಮಾಜವಾದಿ ಪಕ್ಷದ ಎಲ್ಲಾ ಸ್ಥಾನಗಳಿಗೂ ರಾಜಿನಾಮೆ ನೀಡಿರುವುದಾಗಿ ಭಾಟಿಯಾ ಹೇಳಿದ್ದಾರೆ.

ಇಂತಹ ಕಠಿಣ ನಿರ್ಧಾರವನ್ನು ಏತಕ್ಕಾಗಿ ತೆಗೆದುಕೊಂಡಿದ್ದಾಗಿ ಗೌರವ್ ಭಾಟಿಯಾ ಹೇಳಿಲ್ಲ. ಆದರೆ ತಮ್ಮ ರಾಜಿನಾಮೆ ಪತ್ರವನ್ನು ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮತ್ತು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ರವಾನಿಸಿರುವುದಾಗಿ ತಿಳಿಸಿದ್ದಾರೆ.

ಕೆಲ ದಿನಗಳಿಂದ ಸಮಾಜವಾದಿ ಪಕ್ಷದಲ್ಲಿ ರಾಜಿನಾಮೆ ಪರ್ವ ಮುಂದುವರೆದಿದೆ. ಮುಲಾಯಂ ಸಿಂಗ್ ಯಾದವ್ ಆಪ್ತ ಅಂಬಿಕಾ ಚೌಧರಿ, ಅಶು ಯಾದವ್ ಪಕ್ಷದಿಂದ ಹಿಂದೆ ಸರಿದಿದ್ದರು.

ಎರಡು ಹಂತಗಳಲ್ಲಿ ಉತ್ತರಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಫೆಬ್ರವರಿ 11 ಮತ್ತು 15 ರಂದು ಮತದಾನ ನಡೆಯಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT