ಗೌರವ್ ಭಾಟಿಯಾ 
ದೇಶ

ಮತದಾನಕ್ಕೆ 5 ದಿನ ಬಾಕಿ ಇರುವಂತೆ ಸಮಾಜವಾದಿ ಪಕ್ಷ ತೊರೆದ ಗೌರವ್ ಭಾಟಿಯಾ

ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಮತದಾನಕ್ಕೆ ಇನ್ನು ಐದು ದಿನಗಳು ಬಾಕಿ ಇರುವಂತೆ ಸಮಾಜವಾದಿ ಪಕ್ಷದ ಎಲ್ಲಾ ಸ್ಥಾನಗಳಿಗೂ ಗೌರವ್ ಭಾಟಿಯಾ...

ನವದೆಹಲಿ: ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಮತದಾನಕ್ಕೆ ಇನ್ನು ಐದು ದಿನಗಳು ಬಾಕಿ ಇರುವಂತೆ ಸಮಾಜವಾದಿ ಪಕ್ಷದ ಎಲ್ಲಾ ಸ್ಥಾನಗಳಿಗೂ ಗೌರವ್ ಭಾಟಿಯಾ ರಾಜಿನಾಮೆ ನೀಡಿದ್ದಾರೆ.

ರಾಷ್ಟ್ರೀಯ ಅಧ್ಯಕ್ಷ ಕಾನೂನು ವಿಂಗ್ ಸೇರಿದಂತೆ ಸಮಾಜವಾದಿ ಪಕ್ಷದ ಎಲ್ಲಾ ಸ್ಥಾನಗಳಿಗೂ ರಾಜಿನಾಮೆ ನೀಡಿರುವುದಾಗಿ ಭಾಟಿಯಾ ಹೇಳಿದ್ದಾರೆ.

ಇಂತಹ ಕಠಿಣ ನಿರ್ಧಾರವನ್ನು ಏತಕ್ಕಾಗಿ ತೆಗೆದುಕೊಂಡಿದ್ದಾಗಿ ಗೌರವ್ ಭಾಟಿಯಾ ಹೇಳಿಲ್ಲ. ಆದರೆ ತಮ್ಮ ರಾಜಿನಾಮೆ ಪತ್ರವನ್ನು ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮತ್ತು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ರವಾನಿಸಿರುವುದಾಗಿ ತಿಳಿಸಿದ್ದಾರೆ.

ಕೆಲ ದಿನಗಳಿಂದ ಸಮಾಜವಾದಿ ಪಕ್ಷದಲ್ಲಿ ರಾಜಿನಾಮೆ ಪರ್ವ ಮುಂದುವರೆದಿದೆ. ಮುಲಾಯಂ ಸಿಂಗ್ ಯಾದವ್ ಆಪ್ತ ಅಂಬಿಕಾ ಚೌಧರಿ, ಅಶು ಯಾದವ್ ಪಕ್ಷದಿಂದ ಹಿಂದೆ ಸರಿದಿದ್ದರು.

ಎರಡು ಹಂತಗಳಲ್ಲಿ ಉತ್ತರಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಫೆಬ್ರವರಿ 11 ಮತ್ತು 15 ರಂದು ಮತದಾನ ನಡೆಯಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT