ನಿತೀಶ್ ಕುಮಾರ್ 
ದೇಶ

ಕಮಲಕ್ಕೆ ಬಣ್ಣ ಹಚ್ಚಿದ ನಿತೀಶ್ ಕುಮಾರ್, ಬಿಜೆಪಿಯೊಂದಿಗೆ ಮೈತ್ರಿಯ ಸೂಚನೆ?

ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆಯುತ್ತಿರುವ ಪಾಟ್ನಾ ಪುಸ್ತಕ ಪರಿಷೆಯಲ್ಲಿ ಸಿಎಂ ನಿತೀಶ್ ಕುಮಾರ್ ಕಮಲ (ಬಿಜೆಪಿ ಪಕ್ಷದ ಗುರುತು) ಕ್ಕೆ ಬಣ್ಣ ಹಚ್ಚಿ ಅಚ್ಚರಿ ಮೂಡಿಸಿದ್ದಾರೆ.

ಪಾಟ್ನಾ: ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆಯುತ್ತಿರುವ ಪಾಟ್ನಾ ಪುಸ್ತಕ ಪರಿಷೆಯಲ್ಲಿ ಸಿಎಂ ನಿತೀಶ್ ಕುಮಾರ್ ಕಮಲ (ಬಿಜೆಪಿ ಪಕ್ಷದ ಗುರುತು) ಕ್ಕೆ ಬಣ್ಣ ಹಚ್ಚಿ ಅಚ್ಚರಿ ಮೂಡಿಸಿದ್ದಾರೆ. 
ಕಲಾವಿದರೊಬ್ಬರು ರಚಿಸಿದ್ದ ಕಮಲದ ಚಿತ್ರಕ್ಕೆ ನಿತೀಶ್ ಕುಮಾರ್ ಬಣ್ಣ ಹಚ್ಚಿರುವುದು ಬಿಜೆಪಿಯೊಂದಿಗೆ ಮೈತ್ರಿಗೆ ಮುಂದಾಗುತ್ತಿರುವ ಸೂಚನೆಯೇ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ಗಿರಿರಾಜ್ ಸಿಂಗ್, ನಿತೀಶ್ ಕುಮಾರ್ ಬಣ್ಣ ಹಚ್ಚಿರುವುದು ಅವರ ರಾಜಕೀಯ ಮಹತ್ವಾಕಾಂಕ್ಷೆಯನ್ನು ಸೂಚಿಸುತ್ತದೆ, ಅಷ್ಟೇ ಅಲ್ಲದೇ ಇದು ಲಾಲು ಪ್ರಸಾದ್ ಯಾದವ್ ಅವರಿಗೆ ನೀಡಿರುವ ತಾವು ಸ್ವತಂತ್ರರು ಎಂಬ ಸಂದೇಶವೂ ಹೌದು ಎಂದು ಹೇಳಿದ್ದಾರೆ. 
2015 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು-ಕಾಂಗ್ರೆಸ್-ಆರ್ ಜೆಡಿ ಮಹಾಮೈತ್ರಿಗೆ ಬಹುಮತ ದೊರೆತಿತ್ತು. ಚುನಾವಣೆ ನಂತರ 2016 ರ ಮಾರ್ಚ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮೊದಲ ಬಾರಿಗೆ ವೇದಿಕೆ ಹಂಚಿಕೊಂಡಿದ್ದ ನಿತೀಶ್ ಕುಮಾರ್, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಹಕಾರವನ್ನು ಮುಕ್ತ ಮನಸ್ಸಿನಿಂದ ಶ್ಲಾಘಿಸಿ, ಬಿಜೆಪಿಯೊಂದಿಗಿನ ಮೈತ್ರಿ ಬಗ್ಗೆ ಸುಳಿವು ನೀಡಿದ್ದರು. ಅದೇ ಕಾರ್ಯಕ್ರಮದಲ್ಲಿ ನಿತೀಶ್ ಕುಮಾರ್ ಅವರನ್ನು ನರೇಂದ್ರ ಮೋದಿ ಮಿತ್ರ ಎಂದು ಸಂಬೋಧಿಸಿ ಅಚ್ಚರಿ ಮೂಡಿಸಿದ್ದರು. 
ಇನ್ನು ಇತ್ತೀಚೆಗಷ್ಟೇ ನೋಟು ನಿಷೇಧದ ವಿಚಾರದಲ್ಲಿಯೂ ನಿತೀಶ್ ಕುಮಾರ್ ನರೇಂದ್ರ ಮೋದಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ನೋಟು ನಿಷೇಧಕ್ಕೆ ಬೆಂಬಲ ಘೋಷಿಸಿದ್ದರು. ಇದಾದ ಬಳಿಕ ಬಿಹಾರದಲ್ಲಿ ಮದ್ಯ ನಿಷೇಧ ಮಾಡಿದ್ದ ನಿತೀಶ್ ಕುಮಾರ್ ಸರ್ಕಾರದ ಕ್ರಮವನ್ನು ನರೇಂದ್ರ ಮೋದಿ ಸ್ವಾಗತಿಸಿದ್ದರು. ಈ ಬೆನ್ನಲ್ಲೇ  ಕಮಲಕ್ಕೆ ಬಣ್ಣ ಹಚ್ಚುವ ಮೂಲಕ ನಿತೀಶ್ ಕುಮಾರ್ ರಾಜಕೀಯ ನಡೆಯ ಮುನ್ಸೂಚನೆ ನೀಡಿದ್ದಾರಾ ಎಂಬ ಕುತೂಹಲ ಮೂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT