ಸುಪ್ರೀಂಕೋರ್ಟ್ 
ದೇಶ

ಮತ ಹಾಕದವರಿಗೆ ಸರ್ಕಾರವನ್ನು ಪ್ರಶ್ನಿಸುವ ಹಕ್ಕಿಲ್ಲ: ಸುಪ್ರೀಂಕೋರ್ಟ್

ಚುನಾವಣೆಗಳಲ್ಲಿ ಮತ ಹಾಕದವರಿಗೆ ಸರ್ಕಾರ ಪ್ರಶ್ನಿಸುವ ಅಥವಾ ದೂಷಿಸುವ ಹಕ್ಕಿರುವುದಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ..

ನವದೆಹಲಿ: ಚುನಾವಣೆಗಳಲ್ಲಿ ಮತ ಹಾಕದವರಿಗೆ ಸರ್ಕಾರ ಪ್ರಶ್ನಿಸುವ ಅಥವಾ ದೂಷಿಸುವ ಹಕ್ಕಿರುವುದಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಒತ್ತುವರಿ ತೆರವಿಗೆ ದೇಶದಾದ್ಯಂತ ಅನ್ವಯವಾಗುವಂತಹ ಆದೇಶ ಹೊರಡಿಸಬೇಕೆಂದು 'ವಾಯ್ಸ್ ಆಫ್ ಇಂಡಿಯಾ ಎನ್'ಜಿಒದ ಧನೇಶ್ ಲೆಶ್ ಧನ್ ಎಂಬುವವರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ಕುರಿತ ವಿಚಾರಣೆ ವೇಳೆ ಸ್ವತಃ ಧನೇಶ್ ಅವರೇ ವಾದ ಮಂಡಿಸಿದ್ದರು. ಸರ್ಕಾರಗಳು ಒತ್ತವರಿ ತೆರವಿಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದರು. ಈ ವೇಳೆ ಧನೇಶ್ ಅವರಿಗೆ 'ನೀವು ಮತದಾನ ಮಾಡಿದ್ದೀರೋ? ಇಲ್ಲವೋ?' ಎಂದು ಸಿಜೈ ಜೆ.ಎಸ್ ಖೇಹರ್ ಮತ್ತು ನ್ಯಾಯಮೂರ್ತಿಗಳಾದ ಎನ್.ವಿ. ರಮಣ ಹಾಗೂ ಡಿ.ವೈ. ಚಂದ್ರಚೂಡ ಅವರಿದ್ದ ನೇತೃತ್ವದ ಪೀಠ ಪ್ರಶ್ನಿಸಿತು.

ಈ ವೇಳೆ ಮಾತನಾಡಿದ ಧನೇಶ್ ಅವರು ಸತ್ಯ ಹೇಳುತ್ತೇನೆ. ಜೀವನದಲ್ಲಿ ಎಂದಿಗೂ ನಾನು ಮತದಾನ ಮಾಡಿದವ ನಾನಲ್ಲ' ಎಂದು ಹೇಳಿದರು. ನಂತರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಮತ ಹಾಕದವರಿಗೆ ಸರ್ಕಾರವನ್ನು ಪ್ರಶ್ನಿಸುವ ಅಥವಾ ದೂಷಿಸುವ ಹಕ್ಕಿರುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.

ದೇಶದಲ್ಲಿ ಆಗಿರುವ ಎಲ್ಲಾ ಅತಿಕ್ರಮಣ ತೆರವಿಗೆ ಸಮಗ್ರ ಆದೇಶ ಹೊರಡಿಸಲು ಸಾಧ್ಯವಿಲ್ಲ. ಅಂತಹ ಆದೇಶ ಹೊರಡಿಸಿದ್ದೇ ಆದರೆ, ಅದು ನ್ಯಾಯಾಲಯ ನಿಂದನೆ ಮತ್ತು ಇತರ ಅರ್ಜಿಗಳು ದೊಡ್ಡ ಪ್ರಮಾಣದಲ್ಲಿ ದಾಖಲಾಗುತ್ತವೆ. ಆದ್ದರಿಂದ ಈ ವಿಚಾರವನ್ನು ಆಯಾ ರಾಜ್ಯಗಳ ಹೈಕೋರ್ಟ್ ಗಮನಕ್ಕೆ ತರಬೇಕು ಎಂದು ನ್ಯಾಯಪೀಠವು ಅರ್ಜಿದಾರರಿಗೆ ತಿಳಿಸಿತು.

ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸದೇ ಇದ್ದರೆ ನೀವು ಪ್ರಚಾರಕ್ಕಾಗಿ ಇಂತಹ ಅರ್ಜಿಯನ್ನು ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿದ್ದೀರಿ ಎಂದು ಭಾವಿಸಬೇಕಾಗುತ್ತದೆ ಎಂದು ನ್ಯಾಯಪೀಠ ಹೇಳಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT