ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ 
ದೇಶ

ಭಾರತದೊಂದಿಗೆ ವಿಲೀನ: ಜನಾಭಿಪ್ರಾಯ ಸಂಗ್ರಹಿಸುವಂತೆ ಪಾಕ್'ಗೆ ರಾಜನಾಥ್ ಸಲಹೆ

ಭಾರತದೊಂದಿಗೆ ವಿಲೀನಗೊಳ್ಳಬೇಕೋ ಅಥವಾ ಬೇಡವೋ ಎಂಬುದರ ಕುರಿತಂತೆ ಪಾಕಿಸ್ತಾನ ಮೊದಲು ತನ್ನ ರಾಷ್ಟ್ರದ ಜನತೆಯ ಅಭಿಪ್ರಾಯಗಳನ್ನು ಸಂಗ್ರಹಿಸಬೇಕಿದೆ...

ಹರಿದ್ವಾರ: ಭಾರತದೊಂದಿಗೆ ವಿಲೀನಗೊಳ್ಳಬೇಕೋ ಅಥವಾ ಬೇಡವೋ ಎಂಬುದರ ಕುರಿತಂತೆ ಪಾಕಿಸ್ತಾನ ಮೊದಲು ತನ್ನ ರಾಷ್ಟ್ರದ ಜನತೆಯ ಅಭಿಪ್ರಾಯಗಳನ್ನು ಸಂಗ್ರಹಿಸಬೇಕಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಹರಿದ್ವಾರದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯೊಂದರಲ್ಲಿ ಮಾತನಾಡಿರುವ ಅವರು, ಕಾಶ್ಮೀರದ ಭಾರತದ ಅವಿಭಾಜ್ಯ ಅಂಗವಾಗಿದ್ದು, ಎಂದಿಗೂ ಅವಿಭಾಜ್ಯ ಅಂಗವಾಗಿಯೇ ಉಳಿಯಲಿದೆ. ಅದನ್ನು ಯಾವ ಶಕ್ತಿಯಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಕಾಶ್ಮೀರ ವಿಚಾರದ ಬಗ್ಗೆ ಮಾತನಾಡಿರುವ ಪಾಕಿಸ್ತಾನ ಮೊದಲು ಭಾರತದೊಂದಿಗೆ ವಿಲೀನಗೊಳ್ಳಬೇಕೋ ಅಥವಾ ಇಲ್ಲವೋ ಎಂಬುದರ ಬಗ್ಗೆ ತನ್ನ ರಾಷ್ಟ್ರದ ಜನರ ಅಭಿಪ್ರಾಯವನ್ನು ಸಂಗ್ರಹಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ಎರಡೂ ರಾಷ್ಟ್ರಗಳ ಸಂಬಂಧ ಹದಗೆಟ್ಟಿದೆ. ಪಾಕಿಸ್ತಾನಕ್ಕೆ ಒಂದನ್ನು ಹೇಳಲು ಇಚ್ಛಿಸುತ್ತೇನೆ. ಭಾರತ ಎಂದಿಗೂ ಶಾಂತಿಯುತ ದ್ವಿಪಕ್ಷೀಯ ಸಂಬಂಧವನ್ನು ಬಯಸುತ್ತದೆ. ಆದರೆ, ಈ ಸಂಬಂಧವನ್ನು ಇಸ್ಲಾಮಾಬಾದ್ ಹಾಳು ಮಾಡುತ್ತಲೇ ಬಂದಿದೆ. ಪಾಕಿಸ್ತಾನ ಮೊದಲು ಪ್ರಚೋದನೆ ನೀಡುತ್ತಿರುವ ತನ್ನ ಭಯೋತ್ಪಾದನೆ ನಿಲ್ಲಿಸುವ ಅಗತ್ಯವಿದೆ. ಕಾಶ್ಮೀರ ವಿಚಾರ ಕುರಿತಂತೆ ಪಾಕಿಸ್ತಾನ ಮೊದಲು ತನ್ನ ರಾಷ್ಟ್ರದ ಜನಾಭಿಪ್ರಾಯವನ್ನು ಸಂಗ್ರಹಿಸುವ ಅಗತ್ಯವಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಸೀಮಿತ ದಾಳಿ ನಡೆಸುವ ಮೂಲಕ ನಾವೂ ಕೂಡ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬಲ್ಲೆವು ಎಂಬುದನ್ನು ಭಾರತ ಇಡೀ ವಿಶ್ವಕ್ಕೆ ತೋರಿಸಿದೆ. ಭಾರತ ಶಾಂತಿಯನ್ನು ಪ್ರೀತಿಸುವ ದೇಶವಾಗಿದೆ. ಭಾರತ ವಿರುದ್ಧ ಷಡ್ಯಂತ್ರ ರೂಪಿಸುವವರನ್ನು ನಾವು ಸುಮ್ಮನೆ ಬಿಡುವುದಿಲ್ಲ. ದೇಶದ ವಿರುದ್ಧ ಪಿತೂರಿ ನಡೆಸುವವರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಇಂತಹ ಪರಿಸ್ಥಿತಿಗಳು ಎದುರಾಗಿದ್ದೇ ಆದರೆ, ಭಾರತ ಮೃದುರಾಷ್ಟ್ರವಾಗಿಯೇ ಮುಂದುವರೆಯುವುದಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT