ಮಾಜಿ ಸಚಿವ ಅಹಮದ್ ನಿಧನ ಪ್ರಕರಣ: ಸಂಸತ್ತಿನ ಗಾಂಧಿ ಪ್ರತಿಮೆ ಬಳಿ ಧರಣಿ ಕೂತ ರಾಹುಲ್ ಗಾಂಧಿ 
ದೇಶ

ಮಾಜಿ ಸಚಿವ ಇ.ಅಹಮದ್ ನಿಧನ ಪ್ರಕರಣ: ಸಂಸತ್ತಿನ ಗಾಂಧಿ ಪ್ರತಿಮೆ ಬಳಿ ರಾಹುಲ್ ಧರಣಿ

ಇ. ಅಹಮದ್ ಅವರ ನಿಧನ ಬಳಿಕವೂ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿ, ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಎದಿರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು...

ನವದೆಹಲಿ: ಇ. ಅಹಮದ್ ಅವರ ನಿಧನ ಬಳಿಕವೂ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿ, ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಎದಿರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಧರಣಿ ನಡೆಸುತ್ತಿದ್ದಾರೆ.

ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಭಾಷಣ ಮಾಡುತ್ತಿದ್ದ ವೇಳೆಯೇ ಮಾಜಿ ಸಚಿವ ಇ. ಅಹಮದ್ ಅವರು ಹೃದಯಾಘಾತಕ್ಕೆ ಒಳಗಾಗಿ ನಿಧನ ಹೊಂದಿದ್ದರು. ಫೆ.1 ರಂದು ಕೇಂದ್ರ ಬಜೆಟ್ ಮಂಡನೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಇ. ಅಹಮದ್ ಅವರು ನಿಧರ ಹೊಂದಿರುವ ಹಿನ್ನಲೆಯಲ್ಲಿ ಬಜೆಟ್ ನ್ನು ಮೂಂದೂಡಬೇಕೆಂದು ಆಗ್ರಹಿಸಿದ್ದವು. ಸಾಕಷ್ಟು ವಿರೋಧಗಳ ನಡುವೆಯೂ ಕೇಂದ್ರ ಬಜೆಟ್ ಮಂಡನೆ ಮಾಡಿತ್ತು.

ಇಂದು ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಆರಂಭವಾಗಿರುವ ಹಿನ್ನಲೆಯಲ್ಲಿ ಸಂಸತ್ತಿನ ಗಾಂಧಿ ಪ್ರತಿಮೆ ಬಳಿ ಕೇರಳ ರಾಜ್ಯ ಸಂಸದರು ಹಾಗೂ ಕಾಂಗ್ರೆಸ್ ಸಂಸದರು ಧರಣಿ ಕುಳಿತು ಕೇಂದ್ರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರೂ ಕೂಡ ಕೈಜೋಡಿಸಿದ್ದು, ಸಂಸದರು ಬಾಯಿಗೆ ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT