ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ 
ದೇಶ

ಭ್ರಷ್ಟಾಚಾರವನ್ನು ಭಾರತದಿಂದ ತೊಡೆದುಹಾಕಲು ನೋಟು ನಿಷೇಧದ ಕ್ರಮ: ಪ್ರಧಾನಿ ಮೋದಿ

ನೋಟುಗಳ ಅಮಾನ್ಯತೆಯನ್ನು ವಿರೋಧಿಸುವ ವಿರೋಧ ಪಕ್ಷಗಳ ಟೀಕೆಯನ್ನು ಖಂಡಿಸಿರುವ ಪ್ರಧಾನ...

ನವದೆಹಲಿ: ನೋಟುಗಳ ಅಮಾನ್ಯತೆಯನ್ನು ವಿರೋಧಿಸುವ ವಿರೋಧ ಪಕ್ಷಗಳ ಟೀಕೆಯನ್ನು ಖಂಡಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಈ ವಿಷಯದ ಕುರಿತು ಚರ್ಚಿಸುವ ಬದಲು ವಿರೋಧ ಪಕ್ಷಗಳು ಚಾನೆಲ್ ಗಳ ಜೊತೆ ಮಾತನಾಡುವುದರಲ್ಲಿ ಹೆಚ್ಚು ಆಸಕ್ತಿ ಹೊಂದಿವೆ ಎಂದು ಹೇಳಿದ್ದಾರೆ.
ಮೊದಲನೇ ದಿನದಿಂದಲೂ ನೋಟುಗಳ ಅಮಾನ್ಯತೆ ನಮ್ಮಲ್ಲಿ ಸ್ಪಷ್ಟತೆಯಿದೆ ಮತ್ತು ಇದರ ಕುರಿತು ಚರ್ಚೆಗೆ ಕೂಡ ಸಿದ್ಧರಿದ್ದೇವೆ. ಆದರೆ ವಿರೋಧ ಪಕ್ಷದ ನಾಯಕರು ಸುದ್ದಿ ವಾಹಿನಿಗಳ ಮುಂದೆ ಮಾತನಾಡುವುದು ಬಿಟ್ಟರೆ ಚರ್ಚೆ ಮಾಡಿಲ್ಲ ಎಂದು ಲೋಕಸಭೆಯನ್ನುದ್ದೇಶಿಸಿ ಮಾತನಾಡುವಾಗ ಹೇಳಿದರು.
ನೋಟುಗಳ ನಿಷೇಧ ನಿರ್ಧಾರವನ್ನು ಸರಿಯಾದ ಸಮಯದಲ್ಲಿಯೇ ತೆಗೆದುಕೊಳ್ಳಲಾಗಿದೆ ಎಂದ ಪ್ರಧಾನಿ, ನೀವು ಆಪರೇಶನ್ ಯಾವಾಗ ಮಾಡಿಕೊಳ್ಳುತ್ತೀರಿ, ಆಪರೇಶ
ನ್ ಮಾಡಿಸಿಕೊಳ್ಳಲು ದೇಹದ ಆರೋಗ್ಯ ಚೆನ್ನಾಗಿದೆ ಎಂದುಕೊಳ್ಳುವಾಗ ಮಾಡಿಸಿಕೊಳ್ಳುತ್ತೇವೆ. ಅದೇ ರೀತಿ ನಾವು ಕೂಡ ಸರಿಯಾದ ಸಂದರ್ಭದಲ್ಲಿಯೇ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದರು.
ನೋಟುಗಳ ಅಮಾನ್ಯತೆಯನ್ನು ಸ್ವಚ್ಛ ಭಾರತ ಅಭಿಯಾನಕ್ಕೆ ಹೋಲಿಕೆ ಮಾಡಿದ ಪ್ರಧಾನಿ, ''ಸ್ವಚ್ಛ ಭಾರತದಂತೆ ಭಾರತವನ್ನು ಭ್ರಷ್ಟಾಚಾರ ಮತ್ತು ಕಪ್ಪು ಹಣದಿಂದ ಸ್ವಚ್ಛ ಮಾಡಲು ನೋಟುಗಳ ಅಮಾನ್ಯತೆ ಮಾಡಲಾಗಿದೆ'' ಎಂದರು.
ಸ್ವಚ್ಛ ಭಾರತ ಅಭಿಯಾನವನ್ನು ಟೀಕಿಸಿ ಅದನ್ನು ರಾಜಕೀಯಗೊಳಿಸುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಧಾನಿ, ಸ್ವಚ್ಛ ಮಾಡುವ ವಿಷಯವನ್ನೂ ರಾಜಕೀಯಗೊಳಿಸುವುದು ಏಕೆ ಎಂದು ಅರ್ಥವಾಗುತ್ತಿಲ್ಲ. ಯಾಕೆ ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಬಾರದು ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT