117 ವರ್ಷಗಳ ಕಾಲ ಜೀವಿಸಿದ್ದ ಕರ್ನಲ್ ನಿಜಾಮುದ್ದೀನ್ 
ದೇಶ

ಕರ್ನಲ್ ನಿಜಾಮುದ್ದೀನ್ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಬಲ ನೀಡಿದ್ದರು: ಪ್ರಧಾನಿ

ಹಿರಿಯ ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ ಚಾಲಕರಾಗಿದ್ದ ಕರ್ನಲ್ ನಿಜಾಮುದ್ದೀನ್ ನಿನ್ನೆ...

ನವದೆಹಲಿ: ಹಿರಿಯ ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ ಚಾಲಕರಾಗಿದ್ದ ಕರ್ನಲ್ ನಿಜಾಮುದ್ದೀನ್ ನಿನ್ನೆ ಮೃತಪಟ್ಟಿದ್ದು, ಅವರಿಗೆ 117 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. 
ನೇತಾಜಿಯವರ ಚಾಲಕರು, ಅವರ ತತ್ವ, ನಿಷ್ಠೆ, ಧೈರ್ಯ ಮತ್ತು ದೇಶಭಕ್ತಿಗೆ ಹೆಸರಾಗಿದ್ದು, ಭಾರತೀಯ ಸ್ವಾತಂತ್ರ್ಯ ಸಂಗ್ರಾಮಕ್ಕೆ ಬಲ ನೀಡಿದ್ದಾರೆ ಎಂದರು.
ಇಂದು ಟ್ವೀಟ್ ಮಾಡಿರುವ ಪ್ರಧಾನಿ, ಸುಭಾಷ್ ಚಂದ್ರ ಬೋಸ್ ಅವರ ನಿಕಟವರ್ತಿ ಕರ್ನಲ್ ನಿಜಾಮುದ್ದೀನ್ ಅವರಿಗೆ ಗೌರವ ನಮನಗಳು. ಅವರ ಅಗಲಿಗೆ ನೋವುಂಟುಮಾಡುತ್ತಿದೆ ಎಂದು ಹೇಳಿದ್ದಾರೆ.
ಭಾರತೀಯ ರಾಷ್ಟ್ರೀಯ ಸೇನೆಯಲ್ಲಿ 1943ರಿಂದ 1945ರವರೆಗೆ ಸೇವೆ ಸಲ್ಲಿಸಿದ್ದ ಕರ್ನಲ್ ನಿಜಾಮುದ್ದೀನ್ ದೀರ್ಘಕಾಲದ ಅಸೌಖ್ಯದಿಂದ ಉತ್ತರ ಪ್ರದೇಶದ ಅಜಮ್ ಗರ್ ನ ದಕ್ವಾ ಗ್ರಾಮದಲ್ಲಿ ನಿನ್ನೆ ನಿಧನ ಹೊಂದಿದರು. 1901ರಲ್ಲಿ ಹುಟ್ಟಿದ ನಿಜಾಮುದ್ದೀನ್ ಪತ್ನಿ, ಮೂವರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT