ಸಾಂದರ್ಭಿಕ ಚಿತ್ರ 
ದೇಶ

ಎರಡೂವರೆ ಲಕ್ಷ ರೂಪಾಯಿಗಿಂತ ಹೆಚ್ಚು ಹಣ ಡೆಪಾಸಿಟ್ ಮಾಡಿದವರ ವಿರುದ್ಧ ವಿಚಾರಣೆ

ನೋಟು ನಿಷೇಧ ತೀರ್ಮಾನದ ನಂತರ ಬ್ಯಾಂಕ್‌ ಖಾತೆಗಳಲ್ಲಿ ರು.2.5 ಲಕ್ಷಕ್ಕಿಂತ ಹೆಚ್ಚು ಹಣ ಜಮಾ ಮಾಡಿದವರನ್ನು ಮಾತ್ರ ವಿಚಾರಣೆಗೆ ಒಳಪಡಿಸಲಾಗುವುದು...

ನವದೆಹಲಿ: ನೋಟು ನಿಷೇಧ ತೀರ್ಮಾನದ ನಂತರ ಬ್ಯಾಂಕ್‌ ಖಾತೆಗಳಲ್ಲಿ ರು.2.5 ಲಕ್ಷಕ್ಕಿಂತ ಹೆಚ್ಚು ಹಣ ಜಮಾ ಮಾಡಿದವರನ್ನು ಮಾತ್ರ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಜಮಾ ಮಾಡಿದ ಮೊತ್ತವು ವ್ಯಕ್ತಿಯ ಆದಾಯ ತೆರಿಗೆ ಲೆಕ್ಕಪತ್ರದ ಜೊತೆ ಹೊಂದಾಣಿಕೆಯಾಗಿದಿದ್ದರೇ ಅಂಥ ವ್ಯಕ್ತಿಗಳನ್ನೂ ವಿಚಾರಣೆಗೆ ಒಳಪಡಿಸಲಾಗುವುದು. ದತ್ತಾಂಶ ವಿಶ್ಲೇಷಣೆ ಮೂಲಕ ಇಲಾಖೆಯು, ವಿವಿಧ ಮೊತ್ತದ ಹಣ ಜಮೆ ಮಾಡಿದವರ ವಿವರ ಪರಿಶೀಲಿಸಿದೆ. ಹಿಂದಿನ ವರ್ಷದಲ್ಲಿ ವ್ಯಕ್ತಿ ಸಲ್ಲಿಸಿದ್ದ ಆದಾಯ ತೆರಿಗೆ ಲೆಕ್ಕ ಹಾಗೂ ಜಮಾ ಮೊತ್ತದ ನಡುವೆ ತಾಳೆ ಆಗದಿದ್ದರೆ, ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದೆ.

ನ್ಯಾಯಯುತವಾಗಿ ವಹಿವಾಟು ನಡೆಸಿದವರಿಗೆ ಕಿರುಕುಳ ಎದುರಾಗದಂತೆ ನೋಡಿಕೊಳ್ಳುತ್ತೇವೆ ಎಂದು ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಅಧ್ಯಕ್ಷ ಸುಶೀಲ್‌ ಚಂದ್ರ ತಿಳಿಸಿದ್ದಾರೆ. 2.5 ಲಕ್ಷದವರೆಗೆ ಹಣ ಜಮಾ ಮಾಡಿದವರನ್ನು ಪ್ರಶ್ನಿಸುವುದಿಲ್ಲ ಎಂದು ಪ್ರಧಾನಿಯವರೇ ಹೇಳಿದ್ದಾರೆ. ಹಾಗಾಗಿ ನಾವು ಆ ಮೊತ್ತದವರೆಗೆ ಹಣ ಜಮಾ ಮಾಡಿದವರ ಮಾಹಿತಿಯನ್ನು ಪ್ರತ್ಯೇಕವಾಗಿ ಇರಿಸಿದ್ದೇವೆ ಎಂದು ಹೇಳಿದರು.

ವ್ಯಕ್ತಿಯೊಬ್ಬ ಪ್ರತಿ ವರ್ಷ ರು. 10 ಲಕ್ಷ ಸಂಪಾದಿಸಿ, ಅದಕ್ಕೆ ತೆರಿಗೆ ಪಾವತಿಸುತ್ತಿದ್ದರೆ, ಆ ವ್ಯಕ್ತಿ ಮಾಡಿದ ರು. 3 ಲಕ್ಷದವರೆಗಿನ ಜಮೆಯನ್ನು ಇಲಾಖೆ ಪ್ರಶ್ನಿಸುವುದಿಲ್ಲ. ಕಂಪೆನಿಗಳು ಆದಾಯ ಮತ್ತು ಖರ್ಚಿನ ವಿವರದಲ್ಲಿ ತಮ್ಮ ಬಳಿ ರು. 10 ಲಕ್ಷ ನಗದು ಇದೆ ಎಂದು ಹೇಳಿಕೊಂಡು, ಅದರಲ್ಲಿ 5 ಲಕ್ಷ ಜಮಾ ಮಾಡಿದ್ದರೆ, ಅವು ಇಲಾಖೆಯಿಂದ ವಿಚಾರಣೆ ಎದುರಿಸಬೇಕಿಲ್ಲ ಎಂದು ತಿಳಿಸಿದ್ದಾರೆ.

ವ್ಯಕ್ತಿಯೊಬ್ಬ ಸತತವಾಗಿ ಮೂರು ವರ್ಷಗಳಿಂದ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸದೆ, ನೋಟು ರದ್ದತಿ ನಂತರ ರು. 5 ಲಕ್ಷ ಜಮಾ ಮಾಡಿದ್ದರೆ ಅಂಥವರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ. ರು.  2.5 ಲಕ್ಷಕ್ಕೆ ಆದಾಯ ತೆರಿಗೆ ಲೆಕ್ಕ ಸಲ್ಲಿಸಿ, ಬೇರೆ ಬೇರೆ ಬ್ಯಾಂಕ್‌ ಖಾತೆಗಳಲ್ಲಿ ಒಟ್ಟು ರು 10 ಲಕ್ಷ ಜಮಾ ಮಾಡಿದ್ದರೆ ವಿಚಾರಣೆ ಎದುರಿಸಬೇಕಾಗುತ್ತದೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

SCROLL FOR NEXT