ಸುಪ್ರೀಂ ಕೋರ್ಟ್ 
ದೇಶ

ಕೋಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ನಿಂದನೆ ನೊಟೀಸ್ ಜಾರಿ

ಸುಪ್ರೀಂ ಕೋರ್ಟ್ ನಲ್ಲಿ ಬುಧವಾರ ನಡೆದ ಅಪರೂಪದ ವಿಚಾರಣೆಯೊಂದರಲ್ಲಿ ಸುಪ್ರೀಂ ಕೋರ್ಟ್ ಹಾಗೂ...

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಬುಧವಾರ ನಡೆದ ಅಪರೂಪದ ವಿಚಾರಣೆಯೊಂದರಲ್ಲಿ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ಅಶ್ಲೀಲ ಪತ್ರಗಳನ್ನು ಬರೆದದ್ದಕ್ಕಾಗಿ ಏಳು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ, ಕೋಲ್ಕತ್ತಾ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿ ಸಿ.ಎಸ್. ಕರ್ನನ್ ಅವರಿಗೆ ನಿಂದನೆ ನೊಟೀಸ್ ಜಾರಿ ಮಾಡಲಾಗಿದೆ. 
ಹಾಲಿ ನ್ಯಾಯಾಧೀಶರಿಗೆ ಇದೇ ಮೊದಲ ಬಾರಿಗೆ ನಿಂದನೆ ನೊಟೀಸ್ ಜಾರಿ ಮಾಡಲಾಗಿದೆ.
ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಅವರ ನೇತೃತ್ವದ ಏಳು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ, ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಕರ್ನನ್ ವಿರುದ್ಧ ಏಕೆ ನಡೆಸಬಾರದೆಂದು ಕೇಳಿದೆ ಮತ್ತು ಫೆಬ್ರವರಿ 13ರಂದು ನ್ಯಾಯಾಲಯಕ್ಕೆ ವಿಚಾರಣೆಗೆ ಖುದ್ದು ಹಾಜರಾಗುವಂತೆ ಹೇಳಿದೆ.
ಅಲ್ಲದೆ ಎಲ್ಲಾ ನ್ಯಾಯಾಂಗ ಮತ್ತು ಆಡಳಿತಾತ್ಮಕ ಕೆಲಸಗಳನ್ನು ಮಾಡದಂತೆ ಮತ್ತು ತಮ್ಮಲ್ಲಿರುವ ಎಲ್ಲಾ ದಾಖಲೆಗಳನ್ನು ರಿಜಿಸ್ಟ್ರಾರ್ ಜನರಲ್ ಅವರಿಗೆ ಹಿಂತಿರುಗಿಸುವಂತೆಯೂ ನ್ಯಾಯಪೀಠ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT