ಸಾಂದರ್ಭಿಕ ಚಿತ್ರ 
ದೇಶ

ಪೋಷಕರನ್ನು ಕಡೆಗಣಿಸಿದರೇ ವೇತನಕ್ಕೆ ಕತ್ತರಿ: ನೌಕರರಿಗೆ ಸರ್ಕಾರದ ಎಚ್ಚರಿಕೆ

ಹೆತ್ತವರನ್ನು ಸರಿಯಾಗಿ ನೋಡಿಕೊಳ್ಳದೇ ಅವರನ್ನು ಕಡೆಗಣಿಸಿದರೇ ಅಂಥವರ ವೇತನ ಕಟ್ ಮಾಡುವುದಾಗಿ ತನ್ನ ಎಲ್ಲಾ ನೌಕರರಿಗೆ ಅಸ್ಸಾಂ ಸರ್ಕಾರ ...

ಗುವಾಹಟಿ: ಹೆತ್ತವರನ್ನು ಸರಿಯಾಗಿ ನೋಡಿಕೊಳ್ಳದೇ ಅವರನ್ನು ಕಡೆಗಣಿಸಿದರೇ ಅಂಥವರ ವೇತನ ಕಟ್ ಮಾಡುವುದಾಗಿ ತನ್ನ ಎಲ್ಲಾ ನೌಕರರಿಗೆ ಅಸ್ಸಾಂ ಸರ್ಕಾರ ಎಚ್ಚರಿಕೆ ನೀಡಿದೆ.

ಮಂಗಳವಾರ ಅಸ್ಸಾಂ ಹಣಕಾಸು ಸಚಿವ ಹಿಮಂತಾ ಬಿಸ್ವಾ ಮಂಡಿಸಿದ 2017-18ರ ಬಜೆಟ್ ನಲ್ಲಿ ಸರ್ಕಾರ ಪ್ರಸಕ್ತ ವರ್ಷದಿಂದ ನೌಕರರ ವೇತನಕ್ಕೆ ವಯಸ್ಸಾದ ಪೋಷಕರ ಆರೈಕೆ ಲಿಂಕ್ ಅಳವಡಿಸಲು ಉದ್ದೇಶಿಸಿದೆ. ಒಂದು ವೇಳೆ ನೌಕರರು ತಮ್ಮ ಪೋಷಕರನ್ನು ಸರಿಯಾಗಿ ಆರೈಕೆ ಮಾಡದಿದ್ದರೇ  ಅವರ ಸಂಬಳದಲ್ಲಿ ಹಣ ಹಿಡಿಯಲಾಗುವುದು ಎಂದು ಸರ್ಕಾರ ತಿಳಿಸಿದೆ.

ವಯಸ್ಸಾದವರಿಗೆ ತಕ್ಕ ಮಟ್ಟಿಗೆ ಆರೈಕೆ ಮಾಡಬೇಕು, ಇಲ್ಲದಿದ್ದರೇ ನೌಕರರ ಸಂಬಳಕ್ಕೆ ಕತ್ತರಿ ಹಾಕುವ ಆದೇಶವನ್ನು ಶಾಸಕಾಂಗ ಹೊರಡಿಸಿದೆ , ಮಕ್ಕಳಾದವರು ಮುಪ್ಪಲ್ಲಿರುವ ಪೋಷಕರ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ಸ್ವದೇಶಿ ಮೌಲ್ಯಗಳಲ್ಲಿ ನಂಬಿಕೆ ಇಟ್ಟಿರುವ ಬಿಜೆಪಿ ಸರ್ಕಾರ ಎಲ್ಲಾ ಸರ್ಕಾರಿ ನೌಕರರು ಸಾವಿರ ರೂಪಾಯಿ ಮೌಲ್ಯದ ಖಾದಿ ವಸ್ತ್ರ ಖರೀದಿಸುವುದು ಕಡ್ಡಾಯ ಎಂಬ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT