ಅರುಣ್ ಜೇಟ್ಲಿ 
ದೇಶ

ಹಳೆಯ ನೋಟುಗಳನ್ನು ಹೊಂದಿರುವುದು ಶಿಕ್ಷಾರ್ಹ ಅಪರಾಧ: ಲೋಕಸಭೆಯಲ್ಲಿ ಮಸೂದೆಗೆ ಒಪ್ಪಿಗೆ

ಸರ್ಕಾರದ ನೋಟು ನಿಷೇಧ ತೀರ್ಮಾನವನ್ನು ಸಮರ್ಥಿಸಿಕೊಂಡ ಹಣಕಾಸು ಸಚಿವ ಅರುಣ್ ಜೇಟ್ಲಿ, ರೈತರು...

ನವದೆಹಲಿ: ಸರ್ಕಾರದ ನೋಟು ನಿಷೇಧ ತೀರ್ಮಾನವನ್ನು ಸಮರ್ಥಿಸಿಕೊಂಡ ಹಣಕಾಸು ಸಚಿವ ಅರುಣ್ ಜೇಟ್ಲಿ, ರೈತರು ಇದರಿಂದ ತೊಂದರೆ ಅನುಭವಿಸಿದ್ದಾರೆ ಎಂಬುದನ್ನು ಅಲ್ಲಗಳೆದಿದ್ದಾರೆ.
500 ಮತ್ತು 1000ದ 10ಕ್ಕಿಂತ ಹೆಚ್ಚು ನೋಟುಗಳನ್ನು ಹೊಂದಿದ್ದರೆ ಅದು ಶಿಕ್ಷಾರ್ಹ ಅಪರಾಧವಾಗಿದ್ದು ಕನಿಷ್ಠ 10,000 ದಂಡ ವಿಧಿಸುವ ಕಾನೂನನ್ನು ಜಾರಿಗೆ ತರುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದರ ಕುರಿತು ಅವರು ಮಾತನಾಡಿದರು.
ಕಪ್ಪು ಹಣವನ್ನು ತಡೆಯಲು ತಂದಿರುವ ನೋಟುಗಳ ಅಮಾನ್ಯತೆ ವಿಷಯದಲ್ಲಿ ರೈತರ ಸಾವಿನ್ನು ರಾಜಕೀಯ ಸಾಧನವನ್ನಾಗಿ ಬಳಸಿಕೊಳ್ಳಲು ವಿರೋಧ ಪಕ್ಷಗಳು ಪ್ರಯತ್ನಿಸಬೇಡಿ ಎಂದು ಹೇಳಿದರು.
ಕಳೆದ ಶುಕ್ರವಾರ ಜೇಟ್ಲಿಯವರು ನೋಟುಗಳ ಅಮಾನ್ಯತೆ-ನಿರ್ದಿಷ್ಟ ಬ್ಯಾಂಕ್ ನೋಟುಗಳ ಮಸೂದೆ-2017 ಬಗ್ಗೆ ಮಾತನಾಡಿದ ಅವರು, ನವೆಂಬರ್ 8ರ ನೋಟು ನಿಷೇಧ ವಿಶ್ವದ ಅತಿದೊಡ್ಡ ಕರೆನ್ಸಿ ಬದಲಾವಣೆ. ಅಂತಹ ತೀರ್ಮಾನ ತೆಗೆದುಕೊಳ್ಳಲು ಧೈರ್ಯ ಬೇಕು. ಹೀಗಾಗಿ ಕಳೆದ ಏಳು ದಶಕಗಳಲ್ಲಿ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್ ನ್ನು ಟೀಕಿಸಿದರು.
ಈ ಮಸೂದೆ ಡಿಸೆಂಬರ್ 30ರಂದು ಹೊರಡಿಸಿರುವ ಸುಗ್ರೀವಾಜ್ಞೆ ವಿಧೇಯಕವನ್ನು ಬದಲಾಯಿಸಲಿದೆ. 
ನೋಟು ನಿಷೇಧದಿಂದ ರೈತರು ಮೃತಪಟ್ಟಿದ್ದಾರೆ ಎಂಬ ಆರೋಪವನ್ನು ತಳ್ಳಿಹಾಕಿದ ಅವರು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಬಿ ಬಿತ್ತನೆ ಶೇಕಡಾ 7ರಷ್ಟು ಏರಿಕೆಯಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT