ಜನವರಿ 26ರಂದು ರಾಜಧಾನಿ ದೆಹಲಿಯಲ್ಲಿ ನಡೆದ ಪರೇಡ್ ನಲ್ಲಿ ಕರ್ನಾಟಕದ ಕಲಾವಿದರು 
ದೇಶ

ಗಣರಾಜ್ಯೋತ್ಸವ ಪ್ರಶಸ್ತಿಯಲ್ಲಿ ಪಕ್ಷಪಾತ: ಮೋದಿಗೆ ಪತ್ರ ಬರೆದ ರಾಜ್ಯದ ಕಲಾವಿದರು

ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದ ಸ್ತಬ್ಧಚಿತ್ರಗಳು ಹಾಗೂ ಜಾನಪದ ಕಲಾವಿದರಿಗೆ ನೀಡುವ ಬಹುಮಾನದಲ್ಲಿ ಪಕ್ಷಪಾತ ಮಾಡಲಾಗಿದ್ದು, ಅಕ್ರಮಗಳನ್ನು ನಡೆಸಲಾಗಿದೆ ಎಂದು ರಾಜ್ಯದ ಹಲವಾರು ಕಲಾವಿದರು ಪ್ರಧಾನಮಂತ್ರಿ ನರೇಂದ್ರಮೋದಿಯವರಿಗೆ...

ನವದೆಹಲಿ: ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದ ಸ್ತಬ್ಧಚಿತ್ರಗಳು ಹಾಗೂ ಜಾನಪದ ಕಲಾವಿದರಿಗೆ ನೀಡುವ ಬಹುಮಾನದಲ್ಲಿ ಪಕ್ಷಪಾತ ಮಾಡಲಾಗಿದ್ದು, ಅಕ್ರಮಗಳನ್ನು ನಡೆಸಲಾಗಿದೆ ಎಂದು ರಾಜ್ಯದ ಹಲವಾರು ಕಲಾವಿದರು ಪ್ರಧಾನಮಂತ್ರಿ ನರೇಂದ್ರಮೋದಿಯವರಿಗೆ ಪತ್ರವನ್ನು ಬರೆದು ದೂರು ನೀಡಿದ್ದಾರೆಂದು ತಿಳಿದುಬಂದಿದೆ.

ದೆಹಲಿಯಲ್ಲಿ ನಡೆದ ಪರೇಡ್ ನಲ್ಲಿ ಭಾಗವಹಿಸಿದ್ದ ರಾಜ್ಯ ಕಲಾವಿದರು ಈ ಕುರಿತು ಪ್ರಧಾನಿ ಮೋದಿಯವರಿಗೆ ಪತ್ರವನ್ನು ಬರೆದಿದ್ದು, ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡುವಂತೆ ಆಗ್ರಹಿಸಿದ್ದಾರೆ.

ಪರೇಡ್ ನ ಬಹುಮಾನಗಳು ಹಾಗೂ ಸ್ತಬ್ಧ ಚಿತ್ರ ಪ್ರದರ್ಶನಗಳ ವಿಷಯದಲ್ಲಿ ಕೆಲ ಗುತ್ತಿಗೆದಾರರು ಹಾಗೂ ರಕ್ಷಣಾ ಸಂಸ್ಥೆಗಳ ನಡುವೆ ಅಪವಿತ್ರ ಮೈತ್ರಿ ಇದೆ. ಬಹುಮಾನ ಆಯ್ಕೆಯಲ್ಲಿ ಮತ್ತು ನಿರ್ಣಯ ಪ್ರಕ್ರಿಯೆಗಳಲ್ಲಿ ಭಾರೀ ರಾಜಕೀಯ ಮಾಡುತ್ತಿದ್ದು, ಇದು ಸೂಕ್ತವಲ್ಲ ಎಂಬುದು ನಮ್ಮ ಅನಿಸಿಕೆಯಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಸೂಚನೆ ನೀಡಬೇಕಿದ್ದು, ಈ ಮೂಲಕ ಗಣರಾಜ್ಯೋತ್ಸವದ ಸಂಭ್ರದಲ್ಲಿ ನಡೆಯುವ ಭ್ರಷ್ಟಾಚಾರವನ್ನು ತೊಲಗಿಸಬೇಕಿದೆ ಎಂದು ಆಗ್ರಹಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT