ಡಿಎಂಕೆ ನಾಯಕಿ ಕನ್ನಿಮೋಳಿ 
ದೇಶ

ಎಐಎಡಿಎಂಕೆ ಒಳಗಿನ ರಾಜಕೀಯ ಕಿತ್ತಾಟದಲ್ಲಿ ನಮ್ಮ ಪಾತ್ರವಿಲ್ಲ: ಡಿಎಂಕೆ ನಾಯಕಿ ಕನ್ನಿಮೋಳಿ

ಒ.ಪನ್ನೀರ್ ಸೆಲ್ವಂ ಅವರು ತಮ್ಮ ವಿರುದ್ಧ ದಂಗೆಯೇಳಲು ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರೇ ...

ಚೆನ್ನೈ: ಒ.ಪನ್ನೀರ್ ಸೆಲ್ವಂ ಅವರು ತಮ್ಮ ವಿರುದ್ಧ ದಂಗೆಯೇಳಲು ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರೇ ಕಾರಣ ಎಂಬ ವಿ,ಕೆ.ಶಶಿಕಲಾ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಎಂಕೆ ನಾಯಕಿ ಕನ್ನಿಮೋಳಿ, ಈ ವಿಷಯದಲ್ಲಿ ಡಿಎಂಕೆ ಪಕ್ಷ ರಾಜಕೀಯ ಮಾಡುತ್ತಿಲ್ಲ, ನಮ್ಮ ಅಧ್ಯಕ್ಷರು ಅದನ್ನು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಎಎನ್ಐ ಸುದ್ದಿ ಸಂಸ್ಥೆ ಜೊತೆಗೆ ಮಾತನಾಡಿದ ಅವರು, ತಮಿಳು ನಾಡಿನ ಮುಖ್ಯಮಂತ್ರಿ ಯಾರಾಗಬೇಕೆಂಬ ವಿಷಯದಲ್ಲಿ ನಮ್ಮ ಪಕ್ಷ ಮಧ್ಯ ಪ್ರವೇಶಿಸಿಲ್ಲ ಎಂದು ಹೇಳಿದರು.
ಪಕ್ಷದ ಶಾಸಕರಿಗೆ ತಮ್ಮ ನಿಲುವನ್ನು ವ್ಯಕ್ತಡಿಸಲು ಮುಕ್ತ ಅವಕಾಶಗಳಿರಬೇಕೆ ಹೊರತು ಒತ್ತಡದಲ್ಲಿ ಪ್ರಭಾವ ಬೀರುವಂತೆ ಮಾಡಬಾರದು ಎಂದು ಕೂಡ ಹೇಳಿದರು.
ಎಐಎಡಿಎಂಕೆ ಒ.ಪನ್ನೀರ್ ಸೆಲ್ವಂ ಬಣ ಮತ್ತು ಶಶಿಕಲಾ ಬಣ ಎಂದು ಇಬ್ಭಾಗವಾಗುತ್ತದೆ ಎಂಬ ಊಹಾಪೋಹಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಕನ್ನಿಮೋಳಿ ಈ ಪ್ರತಿಕ್ರಿಯೆ ನೀಡಿದ್ದಾರೆ. 
ತಮಿಳು ನಾಡಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಅಂತಿಮ ನಿರ್ಧಾರವನ್ನು ಮುಂದಿನ ಎರಡು ದಿನಗಳಲ್ಲಿ ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ತೆಗೆದುಕೊಳ್ಳುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT