ಸಾಂದರ್ಭಿಕ ಚಿತ್ರ 
ದೇಶ

ಮಣಪ್ಪುರಂ ಫೈನಾನ್ಸ್ ನಲ್ಲಿ ದರೋಡೆ: 5 ಲಕ್ಷ ರೂ. ನಗದು, 30 ಕೆಜಿ ಚಿನ್ನ ಲೂಟಿ

ಮಣಪ್ಪುರಂ ಫೈನಾನ್ಸ್ ಕಚೇರಿಗೆ ನುಗ್ಗಿದ 7 ಮಂದಿ ಶಸ್ತ್ರದಾರಿಗಳು 5 ಲಕ್ಷ ನಗದು ಸೇರಿ ಕೋಟ್ಯಾಂತರ ರು ಮೌಲ್ಯದ ಚಿನ್ನ ದೋಚಿ ಪರಾರಿಯಾಗಿರುವ ಘಟನೆ...

ಗುರಗಾವ್: ಮಣಪ್ಪುರಂ ಫೈನಾನ್ಸ್ ಕಚೇರಿಗೆ ನುಗ್ಗಿದ 7 ಮಂದಿ ಶಸ್ತ್ರದಾರಿಗಳು 5 ಲಕ್ಷ ನಗದು ಸೇರಿ ಕೋಟ್ಯಾಂತರ ರು ಮೌಲ್ಯದ ಚಿನ್ನ ದೋಚಿ ಪರಾರಿಯಾಗಿರುವ ಘಟನೆ ಗುರಗಾವ್ ನಲ್ಲಿ ನಡೆದಿದೆ.

ಸೆಕ್ಯೂರಿಟಿ ಗಾರ್ಡ್  ಹಾಗೂ ಗ್ರಾಹಕರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ಮತ್ತು ಹಣ ದೋಚಿದ್ದಾರೆ. ಗ್ರಾಹಕರ ಸೋಗಿನಲ್ಲಿ ಕಚೇರಿ ಒಳಗೆ ಬಂದ ದರೋಡೆಕೋರರು ಮಹಿಳೆ ಸೇರಿದಂತೆ ನಾಲ್ಕು ಉದ್ಯೋಗಿಗಳನ್ನು ಒತ್ತೆಯಾಗಿರಿಸಿಕೊಂಡಿದ್ದರು. ಮಾಸ್ಕ್ ಹಾಕಿಕೊಂಡಿದ್ದ ಮುಸುಕುಧಾರಿಗಳು ಗುರುತು ಪತ್ತೆಯಾಗದಿರಲೆಂದು ಸಿಸಿಟಿವಿ ಕ್ಯಾಮೆರಾಗೆ ಬಣ್ಣ ಹಚ್ಚಿದ್ದಾರೆ.

ಸ್ಥಳಕ್ಕೆ ಗುರಗಾವ್ ಪೊಲೀಸ್ ಕಮಿಷನರ್ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಎಷ್ಟು ಪ್ರಮಾಣದ ಚಿನ್ನ ಲೂಟಿಯಾಗಿದೆ ಎಂಬುದು ಲೆಕ್ಕಕ್ಕೆ ಸಿಗುತ್ತಿಲ್ಲ . ಸರಿಸುಮಾರು 30 ಕೆಜಿ ಚಿನ್ನ ಲೂಟಿಯಾಗಿದೆ  ಎಂದು ಹೇಳಲಾಗುತ್ತಿದೆ.  ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.
ಕಳೆದ 6 ತಿಂಗಳಲ್ಲಿ ಮಣಪ್ಪುರಂ ಫೈನಾನ್ಸ್ ಕಚೇರಿಯಲ್ಲಿ  ನಡೆದ 6ನೇ ದರೋಡೆ ಇದಾಗಿದೆ. ಮುಂಬೈ ಮತ್ತು ದೆಹಲಿ ಸುತ್ತಮುತ್ತ ಮಣಪ್ಪುರಂ ಕಚೇರಿಗಳನ್ನೇ ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT