ಸ್ಟ್ಯಾಲಿನ್ 
ದೇಶ

ಪನ್ನೀರ್ ಸೆಲ್ವಂಗೆ ಡಿಎಂಕೆ ಕಾರ್ಯಾಧ್ಯಕ್ಷ ಸ್ಟ್ಯಾಲಿನ್ ಬೇಷರತ್ ಬೆಂಬಲ ಇಲ್ಲ

ತಮಿಳುನಾಡು ಮುಖ್ಯಮಂತ್ರಿಯಾಗಲು ಕಸರತ್ತು ನಡೆಸುತ್ತಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ವಿರುದ್ಧ ಬಂಡಾಯ ಸಾರಿರುವ ಒ.ಪನ್ನೀರ್ ಸೆಲ್ವಂ ಗೆ ಡಿಎಂಕೆ ಬೇಷರತ್ ಬೆಂಬಲ ನೀಡುವುದಿಲ್ಲ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಲು ಕಸರತ್ತು ನಡೆಸುತ್ತಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ವಿರುದ್ಧ ಬಂಡಾಯ ಸಾರಿರುವ ಒ.ಪನ್ನೀರ್ ಸೆಲ್ವಂ ಗೆ ಡಿಎಂಕೆ ಬೇಷರತ್ ಬೆಂಬಲ ನೀಡುವುದಿಲ್ಲ ಎಂದು ಡಿಎಂಕೆ  ಕಾರ್ಯಾಧ್ಯಕ್ಷ ಎಂಕೆ ಸ್ಟ್ಯಾಲಿನ್ ಸ್ಪಷ್ಟಪಡಿಸಿದ್ದಾರೆ. 
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪನ್ನೀರ್ ಸೆಲ್ವಂ ರಾಜೀನಾಮೆ ಹಿಂಪಡೆದು, ಮತ್ತೆ ಸರ್ಕಾರ ರಚಿಸಲು ಕಸರತ್ತು ಮಾಡುತ್ತಿದ್ದರೆ, ಶಶಿಕಲಾ ಸರ್ಕಾರ ರಚಿಸಲು ಹಕ್ಕು ಪ್ರತಿಪಾದನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿ, ಪಕ್ಷದಿಂದ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಸ್ಟ್ಯಾಲಿನ್  ಪನ್ನೀರ್ ಸೆಲ್ವಂ ಗೆ ಬೆಂಬಲ ನೀಡುವ ವಿಚಾರವಾಗಿ ಡಿಎಂಕೆ ಅಧ್ಯಕ್ಷ ಎಂ. ಕರುಣಾನಿಧಿ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಅನ್ಬಳಗನ್ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಇದೇ ವೇಳೆ ವೈಯಕ್ತಿಕ ಅಭಿಪ್ರಾಯಗಳನ್ನು ತಿಳಿಸದಂತೆ ಪಕ್ಷದ ಪದಾಧಿಕಾರಿಗಳಿಗೆ ಸ್ಟ್ಯಾಲಿನ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT