ಬಿಜ್ನೋರ್ ನಲ್ಲಿ ಪ್ರಧಾನಿ ಮೋದಿ ಭಾಷಣ 
ದೇಶ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಣ್ಣ ರೈತರ ಸಾಲ ಮನ್ನಾ: ಬಿಜ್ನೋರ್ ನಲ್ಲಿ ಪ್ರಧಾನಿ ಮೋದಿ ಭಾಷಣ

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲು ಸಣ್ಣ ರೈತರ ಬೆಳೆ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಬಿಜ್ನೋರ್: ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲು ಸಣ್ಣ ರೈತರ ಬೆಳೆ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬಿಜ್ನೋರ್ ನಲ್ಲಿ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ  ಸಂಪೂರ್ಣ ಕುಸಿದಿದ್ದು, ಸರ್ಕಾರದ ದುರಾಡಳಿತದಿಂದ ಜನ ತತ್ತರಿಸುತ್ತಿದ್ದಾರೆ. ಒಂದೆಡೆ ರೈತರು ಬೆಳೆ ನಷ್ಟದಿಂದ ಸಂಕಷ್ಟ ಅನುಭವಿಸುತ್ತಿದ್ದರೆ, ಸಾಲ ತೀರಿಸಲಾಗದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಜನ  ಬಿಜೆಪಿಯನ್ನು ಆಶೀರ್ವದಿಸಿ ಅಧಿಕಾರಕ್ಕೆ ತಂದರೆ ತಮ್ಮ ಸರ್ಕಾರದ ಮೊದಲ ಕೆಲಸವೇ ಸಣ್ಣ ರೈತರ ಬೆಳೆ ಸಾಲ ಮನ್ನ ಮಾಡುವುದು. ಅಂತೆಯೇ ರಸಗೊಬ್ಬರದ ಬೆಲೆಯನ್ನು ಕೂಡ ಕಡಿಮೆಗೊಳಿಸುವದಾಗಿ ಮೋದಿ ಆಶ್ವಾಸನೆ  ನೀಡಿದರು.

ಇದೇ ವೇಳೆ ಮಾಜಿ ಪ್ರಧಾನಿ ಚೌದರಿ ಚರಣ್ ಸಿಂಗ್ ಅವರ ಹೆಸರು ಪ್ರಸ್ತಾಪಿಸಿದ ಮೋದಿ, ಚರಣ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಗೊಬ್ಬರ ಬೆಲೆ ಕಡಿಮೆಯಾಗಿತ್ತು. ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅದೇ  ತೆರನಾದ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಇದೇ ವೇಳೆ ಕಾಂಗ್ರೆಸ್ ಮತ್ತು ಎಸ್ ಪಿ ಮೈತ್ರೀ ಕೂಟದ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಒಬ್ಬರು ಭಾರತವನ್ನು ಹಾಳು ಮಾಡಿದರು ಮತ್ತೊಬ್ಬರು ಉತ್ತರ  ಪ್ರದೇಶವನ್ನು ಹಾಳು ಮಾಡಿದ್ದಾರೆ. ಇದೀಗ ಇಬ್ಬರೂ ಜೊತೆಯಾಗಿದ್ದು, ಮತದಾರರು ಈ ದುಷ್ಟ ಮೈತ್ರಿಕೂಟವನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಉತ್ತರ ಪ್ರದೇಶದಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಮೋದಿ, ಉತ್ತರ ಪ್ರದೇಶದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಅಪರಾಧ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ರಾಜ್ಯದಲ್ಲಿ  ಸರ್ಕಾರವಿತ್ತೇ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ. ರಾಜ್ಯದಲ್ಲಿನ ಗೂಂಡಾ ಸರ್ಕಾರದಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಈ ಗೂಂಡಾ ಸರ್ಕಾರವನ್ನು ಜನ ತಿರಸ್ಕರಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು.

ಇದೇ ವೇಳೆ ಗುರು ರವಿದಾಸ್ ಅವರನ್ನು ನೆನೆದ ಮೋದಿ, ನಮ್ಮ ಸರ್ಕಾರ ಗುರು ರವಿದಾಸ್ ಅವರ ಸಿದ್ಧಾಂತಗಳನ್ನು ಅನುಕರಿಸುತ್ತಿದೆ. ನಾವು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಮಂತ್ರದೊಂದಿಗೆ  ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT