ಶಶಿಕಲಾ, ವಿದ್ಯಾಸಾಗರ್ ರಾವ್ ಮತ್ತು ಪನ್ನೀರ್ ಸೆಲ್ವಂ 
ದೇಶ

ಶಶಿಕಲಾಗೆ ಶಾಕ್: ಅಕ್ರಮ ಆಸ್ತಿ ತೀರ್ಪು ಬರುವವರೆಗೆ ಕಾಯಲು ರಾಜ್ಯಪಾಲರ ನಿರ್ಧಾರ

ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್‌ ತೀರ್ಪು ನೀಡುವವರೆಗೆ ಇನ್ನೊಬ್ಬ ಆರೋಪಿ ಶಶಿಕಲಾ ಅವರಿಗೆ ಮುಖ್ಯಮಂತ್ರಿಯಾಗಿ ರಾಜ್ಯಪಾಲರು ...

ಚೆನ್ನೈ: ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್‌ ತೀರ್ಪು ನೀಡುವವರೆಗೆ ಇನ್ನೊಬ್ಬ ಆರೋಪಿ ಶಶಿಕಲಾ ಅವರಿಗೆ ಮುಖ್ಯಮಂತ್ರಿಯಾಗಿ ರಾಜ್ಯಪಾಲರು ಪ್ರಮಾಣವಚನ ಬೋಧಿಸದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಶಶಿಕಲಾ ವಿರುದ್ಧದ ಅಕ್ರಮ ಆಸ್ತಿ  ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಶೀಘ್ರವೇ ನ್ಯಾಯಾಲಯ ತೀರ್ಪು ಪ್ರಕಟಿಸುವ ಸಾಧ್ಯತೆಯಿದ್ದು ಅಲ್ಲಿಯವರೆಗೂ ಕಾಯಲು ಗವರ್ನರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ತಮಿಳುನಾಡು ರಾಜಕೀಯ ಬಿಕ್ಕಟ್ಟಿನ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ  ರಾಜ್ಯಪಾಲರು ಯಾವುದೇ ವರದಿ ಕಳುಹಿಸಿಲ್ಲ ಎಂದು ಮೂಲಗಳು ತಿಳಿಸಿವೆ. ತಮಿಳುನಾಡಿನ ಮುಖ್ಯಮಂತ್ರಿಯಾಗಿ ಎಐಎಡಿಎಂಕೆ ಶಾಸಕಾಂಗ ಪಕ್ಷದ ಮುಖ್ಯಸ್ಥೆ ವಿ.ಕೆ. ಶಶಿಕಲಾ ಅವರನ್ನು ನೇಮಿಸುವುದಕ್ಕೆ ಸಂಬಂಧಿಸಿ ರಾಜ್ಯಪಾಲ ಸಿ.ಎಚ್‌ ವಿದ್ಯಾಸಾಗರ್‌ ರಾವ್‌ ಅವರು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ  ರಾಜಕೀಯ ಬಿಕ್ಕಟ್ಟು ಮುಂದುವರಿದಿದೆ.

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸಲು ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ ಶಶಿಕಲಾ ಅಥವಾ  ಶಶಿಕಲಾ ವಿರುದ್ಧ ಬಂಡಾಯ ಎದ್ದಿರುವ ತಮಿಳುನಾಡಿನ ಉಸ್ತುವಾರಿ ಮುಖ್ಯಮಂತ್ರಿ ಒ. ಪನ್ನೀರ್‌ಸೆಲ್ವಂ ಅವರನ್ನು ಮುಂದುವರಿಸಲು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರಿಗೆ ಇಷ್ಟವಿಲ್ಲ ಎಂದು ಹೇಳಲಾಗುತ್ತಿದೆ.

ಇನ್ನೂ ನಿನ್ನೆ ಸಂಜೆ ರಾಜಭವನದಿಂದ ಕೇಂದ್ರ ಗೃಹ ಸಚಿವಾಲಯಕ್ಕೆ ತಮಿಳುನಾಡು ರಾಜಕೀಯ ಅತಂತ್ರ ಸ್ಥಿತಿ ಬಗ್ಗೆ ಎರಡು ಪುಟಗಳ ಮಾಹಿತಿ ರವಾನೆಯಾಗಲಿದೆ ಎಂದು ಹೇಳಲಾಗಿದೆ. ಆದರೆ ಇದಕ್ಕೆ ಯಾವುದೇ ಅಧಿಕಾರಿಯ ಸಹಿ ಅಥವಾ ಕಳುಹಿಸಿದವರ ವಿಳಾಸ ಇಲ್ಲ ಎಂದು ಹೇಳಲಾಗಿದೆ.

ಪ್ರಸಕ್ತವಾಗಿ ತಮಿಳುನಾಡಿನಲ್ಲಿ ಅಪರೂಪದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜೀನಾಮೆ ನೀಡಿದ್ದ ಪನ್ನೀರ್ ಸೆಲ್ವಂ ಮತ್ತೆ ಮುಖ್ಯಮಂತ್ರಿಯಾಗಿ ಮುಂದುವರಿಯಲು ಬಯಸಿದ್ದಾರೆ. ಸರ್ಕಾರ ರಚಿಸಲು ಬಯಸಿರುವ ಶಶಿಕಲಾ ಸುಪ್ರೀಂಕೋರ್ಟ್ ತೀರ್ಪಿಗಾಗಿ ಕಾಯುತ್ತಿದ್ದಾರೆ.

ಮುಖ್ಯ ಕಾರ್ಯದರ್ಶಿ ಗಿರಿಜಾ ವೈದ್ಯನಾಥನ್‌, ಪೊಲೀಸ್‌ ಮಹಾನಿರ್ದೇಶಕ ಟಿ.ಕೆ ರಾಜೇಂದ್ರನ್‌, ಮತ್ತು ಚೆನ್ನೈ ನಗರ ಪೊಲೀಸ್‌ ಆಯುಕ್ತ ಎಸ್‌. ಜಾರ್ಜ್‌ ಅವರನ್ನು ಕರೆಸಿ ರಾಜ್ಯಪಾಲರು ಚರ್ಚೆ ನಡೆಸಿದ್ದಾರೆ. ಶಾಸಕರನ್ನು ಕೂಡಿ ಹಾಕಿದೆ ಎಂಬ ಆರೋಪದ ಸಂಬಂಧ ಅವರನ್ನು ಪತ್ತೆ ಹಚ್ಚಲು ನಿರ್ದೇಶನ ನೀಡಿ, ಪೊಲೀಸರು ಇಬ್ಬರಲ್ಲಿ ಯಾರ ಪರವಾಗಿಯೂ ನಿಲ್ಲದೇ ಪ್ರಾಮಾಣಿಕತೆಯಿಂದ ಕೆಲಸ ಮಾಡುವಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT