ವಿ.ಕೆ.ಶಶಿಕಲಾ 
ದೇಶ

ಕಾದು ನೋಡಿ, ನಾಳೆಯಿಂದ ಹೊಸ ಪ್ರತಿಭಟನೆ ಆರಂಭಿಸುತ್ತೇವೆ: ವಿ.ಕೆ.ಶಶಿಕಲಾ

ಕಾದು ನೋಡಿ, ನಾಳೆಯಿಂದ ನಾವು ಹೊಸ ಪ್ರತಿಭಟನೆ ಆರಂಭಿಸುತ್ತೇವೆ. ತಂತ್ರಗಳನ್ನು ವಿಳಂಬ...

ಚೆನ್ನೈ: ಕಾದು ನೋಡಿ, ನಾಳೆಯಿಂದ ನಾವು ಹೊಸ ಪ್ರತಿಭಟನೆ ಆರಂಭಿಸುತ್ತೇವೆ. ತಂತ್ರಗಳನ್ನು ವಿಳಂಬ ಮಾಡುವುದು ಪಕ್ಷದಲ್ಲಿ ವಿಭಜನೆ ಮಾಡುವ ಪ್ರಯತ್ನ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ರಾಜ್ಯಪಾಲ ಸಿ. ವಿದ್ಯಾಸಾಗರ್ ರಾವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೆನ್ನೈ ಹೊರವಲಯದಲ್ಲಿರುವ ರೆಸಾರ್ಟ್ ನಲ್ಲಿರುವ ಶಾಸಕರನ್ನು ಭೇಟಿ ಮಾಡಿ ಸಭೆ ನಡೆಸಿದ ಬಳಿಕ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ  ಎಲ್ಲಾ ಶಾಸಕರು ಚೆನ್ನಾಗಿದ್ದಾರೆ ಮತ್ತು ಸಂತೋಷವಾಗಿದ್ದಾರೆ. ರಾಜ್ಯಪಾಲರಿಂದ ಪ್ರತಿಕ್ರಿಯೆ ಬರುವವರೆಗೆ ನಾವು ಈ ಕ್ಷಣದವರೆಗೂ ತಾಳ್ಮೆಯಿಂದ ಕಾಯುತ್ತಿದ್ದೆವು. ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಪಕ್ಷದ ಶಾಸಕರನ್ನು ಭೇಟಿಯಾದ ನಂತರ ನನಗೆ ಸಂತೋಷವಾಗಿದೆ. ಸರ್ಕಾರ ರಚನೆಗೆ ಅವಕಾಶ ನೀಡದೆ ಸಮಯ ವಿಳಂಬ ಮಾಡುತ್ತಿರುವುದು ಪಕ್ಷವನ್ನು ಒಡೆಯುವ ತಂತ್ರ ಎನಿಸುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT