ಸಿ.ಎಸ್ ಕರ್ಣನ್ 
ದೇಶ

ನನ್ನ ಪ್ರಕರಣನ್ನು ಸಂಸತ್ತಿಗೆ ವರ್ಗಾಯಿಸಿ: ನ್ಯಾಯಮೂರ್ತಿ ಸಿ.ಎಸ್ ಕರ್ಣನ್

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಅವರು ನನ್ನ ವಿರುದ್ಧ ಪೂರ್ವಾಗ್ರಹ ಹೊಂದಿದ್ದಾರೆ. ನನ್ನ ಪ್ರಕರಣವನ್ನು ಸಂಸತ್ತಿಗೆ ವರ್ಗಾಯಿಸಬೇಕು...

ನವದೆಹಲಿ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಅವರು ನನ್ನ ವಿರುದ್ಧ ಪೂರ್ವಾಗ್ರಹ ಹೊಂದಿದ್ದಾರೆ. ನನ್ನ ಪ್ರಕರಣವನ್ನು ಸಂಸತ್ತಿಗೆ ವರ್ಗಾಯಿಸಬೇಕು  ಎಂದು ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿರುವ ಕೊಲ್ಕೋತ್ತ ಹೈಕೋರ್ಟ್‌ ನ್ಯಾಯಮೂರ್ತಿ ಸಿ.ಎಸ್. ಕರ್ಣನ್ ಹೇಳಿದ್ದಾರೆ.  

ಸುಪ್ರೀಂಕೋರ್ಟ್ ಪ್ರಧಾನ ರಿಜಿಸ್ಟಾರ್ ಅವರಿಗೆ 4 ಪುಟಗಳ ಪತ್ರ ಬರೆದಿರುವ  ಕರ್ಣನ್ ಮೇಲ್ಜಾತಿಯ ನ್ಯಾಯಮೂರ್ತಿಗಳಿಗೆ ದಲಿತ ನ್ಯಾಯಮೂರ್ತಿಯೊಬ್ಬ ಕರ್ತವ್ಯ ನಿರ್ವಹಿಸುವುದು ಬೇಕಾಗಿಲ್ಲ, ನನ್ನ ಪ್ರಕರಣವನ್ನು ಸಂಸತ್ತಿಗೆ ವರ್ಗಾಯಿಸಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮೇಲ್ಜಾತಿಯ ನ್ಯಾಯಮೂರ್ತಿಗಳು ಕಾನೂನನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ, ತಮಗೆ ನೀಡಿರುವ ನ್ಯಾಯಿಕ ಅಧಿಕಾರವನ್ನು ದಲಿತ ನ್ಯಾಯಮೂರ್ತಿ ವಿರುದ್ಧ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದನ್ನು ನನ್ನ ವಿರುದ್ಧ ಹೊರಡಿಸಿ ರುವ ಆದೇಶವು ಸ್ಪಷ್ಟವಾಗಿ ತೋರಿಸುತ್ತದೆ ಎಂದೂ ಅವರು ಹೇಳಿದ್ದಾರೆ.

ನಾನು ಜವಾಬ್ದಾರಿಯುತ ನ್ಯಾಯಮೂರ್ತಿ. ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಅನೈತಿಕ ಕೆಲಸಗಳಿಗೆ ಪುರಾವೆಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದೇನೆ’ ಎಂದು ಅವರು ಹೇಳಿಕೊಂಡಿದ್ದಾರೆ. ಹೈಕೋರ್ಟ್‌ ನ್ಯಾಯಮೂರ್ತಿಗೆ ಶಿಕ್ಷೆ ವಿಧಿಸುವ ಅಧಿಕಾರ ನ್ಯಾಯಾಲಯಗಳಿಗೆ ಇಲ್ಲ. ಹಾಗಾಗಿ, ನನ್ನ ವಿರುದ್ಧದ ಆದೇಶ ಅನುಷ್ಠಾನಕ್ಕೆ ತರಲು ಯೋಗ್ಯವಲ್ಲದ್ದು ಎಂದು ವಾದಿಸಿದ್ದಾರೆ.

ಕರ್ಣನ್‌ ವಿರುದ್ಧ ಸುಪ್ರೀಂ ಕೋರ್ಟ್‌ ಸ್ವಯಂಪ್ರೇರಿತವಾಗಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ. ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್‌ ಜಾರಿಗೊಳಿಸಿರುವ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಪೀಠ, ಫೆಬ್ರುವರಿ 13ರಂದು ವಿಚಾರಣೆಗೆ ಖುದ್ದಾಗಿ ಹಾಜರಾಗಬೇಕು ಎಂದು ಸೂಚಿಸಿದೆ. ಕರ್ಣನ್ ಅವರಿಗೆ ನ್ಯಾಯದಾನದ ಹಾಗೂ ನ್ಯಾಯಾಂಗದ ಆಡಳಿತಕ್ಕೆ ಸಂಬಂಧಿಸಿದ ಯಾವ ಕೆಲಸವನ್ನೂ ನೀಡಬಾರದು ಎಂದು ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT